Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾವು ಕಚ್ಚಿ ಆಸ್ಪತ್ರೆ ಸೇರಿದ್ದಕ್ಕೆ ಲಾಕ್ ಆದ ಆರೋಪಿ : ಯೋಗೀಶ್ವರ್ ಬಾವನ ಕೊಲೆ ಆಗಿದ್ದು ಇದೇ ಕಾರಣಕ್ಕೆ..!

Facebook
Twitter
Telegram
WhatsApp

ಡಿಸೆಂಬರ್ 5ರಂದು ಬಿಜೆಪಿ ನಾಯಕ ಸಿಪಿ ಯೋಗೀಶ್ವರ್ ಅವರ ಬಾವ ಮಹದೇವಯ್ಯ ಅವರ ಕೊಲೆಯಾಗಿತ್ತು. ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯ ಅವರನ್ನು ಹುಡುಕಿ ಹೊರಟ ಎರಡು ದಿನದಲ್ಲಿ ಅವರು ಕೊಲೆಯಾಗಿದ್ದು, ಬೆಳಕಿಗೆ ಬಂದಿತ್ತು. ಅಂದಿನಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ. ಮಹದೇವಯ್ಯ ಅವರನ್ನು ಯಾವ ಕಾತಣಕ್ಕೆ ಕೊಲೆ ಮಾಡಲಾಗಿದೆ..? ಕೊಲೆ ಮಾಡಿದ್ದು ಯಾರು..? ಎಂಬ ಹುಡುಕಾಟ ಶುರುವಾಗಿತ್ತು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದರು.

 

ಇದೀಗ ಪ್ರಕರಣ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಹದೇವಯ್ಯ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಮುರುಗೇಶ್ (40) ಬಂಧಿತ ಆರೋಪಿಯಾಗಿದ್ದಾನೆ. ಮುರುಗೇಶ್ ಜೊತೆಗೆ ಇನ್ನಿಬ್ಬರು ಆರೋಪಿಗಳು ಸೇರಿಕೊಂಡು ಈ ಕೊಲೆ ಮಾಡಲಾಗಿದೆ. ಹಣದ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ.

 

ಮುರುಗೇಶ್, ಈ ಹಿಂದೆ ಯೋಗೇಶ್ವರ್ ಸಹೋದರ ಗಂಗಾಧರ್ ಎಂಬುವವರ ತೋಟದ ಕಾವಲುಗಾರನಾಗಿದ್ದ. ಮಹದೇವಯ್ಯನವರ ತೋಟದ ಪಕ್ಕದಲ್ಲಿದ್ದ ಈ ತೋಟದಲ್ಲಿ ಪತ್ನಿಯ ಸಮೇತ ನೆಲೆಸಿದ್ದ. ಆದರೆ ಈತನನ್ನು ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ತೋಟದಲ್ಲಿ ಕೆಲಸ ಮಾಡುವಾಗ ಕಾವಲುಗಾರ ಮುರುಗೇಶ್, ಮಹದೇವಯ್ಯನವರ ವಿಶ್ವಾಸ ಗಳಿಸಿದ್ದ. ಜಮೀನು ಮಾರಿರುವ ಹಿನ್ನೆಲೆಯಲ್ಲಿ ಮಹದೇವಯ್ಯ ಬಳಿ ಅಪಾರವಾದ ಹಣವಿದೆ ಎಂಬ ಮಾಹಿತಿ ಆತನಿಗೆ ಗೊತ್ತಿತ್ತು. ಹೀಗಾಗಿ ಕಿಡ್ನಾಪ್ ಮಾಡಿ, ಕೊಲೆ ಮಾಡಲಾಗಿತ್ತು. ಫೋನ್ ಬಳಕೆ ಮಾಡದ ಆರೋಪಿಗಳನ್ನು ಹಿಡಿಯುವುದು ಬಹಳ ಕಷ್ಟವಾಗಿತ್ತು. ಆದರೆ ಅದರಲ್ಲಿ ಒಬ್ಬ ಆರೋಪಿ, ಹಾವು ಕಚ್ಚಿದ್ದ ಮೇಲೆ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾನೆ. ಆಗ ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಪರಾರಿಯಾಗಲು ಯತ್ನಿಸಿ ಕೊನೆಗೆ ಸಿಕ್ಕಿಬಿದ್ದಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಮೇ 1ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ಏ.30: ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ

ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು : ಕೋರ್ ಕಮಿಟಿಯಲ್ಲಿ ತೀರ್ಮಾನ

ಹುಬ್ಬಳ್ಳಿ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ. ಜಿ.ಟಿ ದೇವೇಗೌಡರ ನೇತೃತ್ವದ ಕೋರ್ ಕಮಿಟಿಯಲ್ಲಿ ಈ ಸಂಬಂಧ ನಿರ್ಧಾರವಾಗಿದ್ದು, ಅಮಾನತು ಮಾಡಲಾಗಿದೆ. ಈ ಸಂಬಂಧ

ಬಿಜೆಪಿ ನಾಯಕನಿಗೆ ಮಾತ್ರ ಪೆನ್ ಡ್ರೈವ್ ಕೊಟ್ಟಿದ್ದೆ : ಶಾಕಿಂಗ್ ವಿಡಿಯೋ ಬಿಟ್ಟ ಡ್ರೈವರ್ ಕಾರ್ತಿಕ್

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನೇ ದಿನೇ ಹಲವು ವಿಚಾರಗಳು ಹೊರಗೆ ಬರುತ್ತಿವೆ. ನಿನ್ನೆಯಷ್ಟೇ ವಕೀಲ, ಬಿಜೆಪಿ ನಾಯಕ ದೇವರಾಜೇಗೌಡ, ಪೆನ್ ಡ್ರೈವ್ ವಿಚಾರವಾಗಿ ಮಾತನಾಡಿ, ಕಾರ್ತಿಕ್ ಬಳಿ ಪೆನ್ ಡ್ರೈವ್

error: Content is protected !!