Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಾವು ಕಚ್ಚಿ ಆಸ್ಪತ್ರೆ ಸೇರಿದ್ದಕ್ಕೆ ಲಾಕ್ ಆದ ಆರೋಪಿ : ಯೋಗೀಶ್ವರ್ ಬಾವನ ಕೊಲೆ ಆಗಿದ್ದು ಇದೇ ಕಾರಣಕ್ಕೆ..!

---Advertisement---

ಡಿಸೆಂಬರ್ 5ರಂದು ಬಿಜೆಪಿ ನಾಯಕ ಸಿಪಿ ಯೋಗೀಶ್ವರ್ ಅವರ ಬಾವ ಮಹದೇವಯ್ಯ ಅವರ ಕೊಲೆಯಾಗಿತ್ತು. ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಮಹದೇವಯ್ಯ ಅವರನ್ನು ಹುಡುಕಿ ಹೊರಟ ಎರಡು ದಿನದಲ್ಲಿ ಅವರು ಕೊಲೆಯಾಗಿದ್ದು, ಬೆಳಕಿಗೆ ಬಂದಿತ್ತು. ಅಂದಿನಿಂದ ಪೊಲೀಸರು ತನಿಖೆ ನಡೆಸುತ್ತಲೇ ಇದ್ದಾರೆ. ಮಹದೇವಯ್ಯ ಅವರನ್ನು ಯಾವ ಕಾತಣಕ್ಕೆ ಕೊಲೆ ಮಾಡಲಾಗಿದೆ..? ಕೊಲೆ ಮಾಡಿದ್ದು ಯಾರು..? ಎಂಬ ಹುಡುಕಾಟ ಶುರುವಾಗಿತ್ತು. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸುತ್ತಿದ್ದರು.

 

ಇದೀಗ ಪ್ರಕರಣ ಆರೋಪಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಮಹದೇವಯ್ಯ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಲಾಗಿದೆ. ತಮಿಳುನಾಡು ಮೂಲದ ಮುರುಗೇಶ್ (40) ಬಂಧಿತ ಆರೋಪಿಯಾಗಿದ್ದಾನೆ. ಮುರುಗೇಶ್ ಜೊತೆಗೆ ಇನ್ನಿಬ್ಬರು ಆರೋಪಿಗಳು ಸೇರಿಕೊಂಡು ಈ ಕೊಲೆ ಮಾಡಲಾಗಿದೆ. ಹಣದ ವಿಚಾರಕ್ಕೆ ಈ ಕೊಲೆ ನಡೆದಿದೆ ಎನ್ನಲಾಗುತ್ತಿದೆ.

 

ಮುರುಗೇಶ್, ಈ ಹಿಂದೆ ಯೋಗೇಶ್ವರ್ ಸಹೋದರ ಗಂಗಾಧರ್ ಎಂಬುವವರ ತೋಟದ ಕಾವಲುಗಾರನಾಗಿದ್ದ. ಮಹದೇವಯ್ಯನವರ ತೋಟದ ಪಕ್ಕದಲ್ಲಿದ್ದ ಈ ತೋಟದಲ್ಲಿ ಪತ್ನಿಯ ಸಮೇತ ನೆಲೆಸಿದ್ದ. ಆದರೆ ಈತನನ್ನು ಇತ್ತೀಚೆಗೆ ಕೆಲಸದಿಂದ ತೆಗೆದು ಹಾಕಲಾಗಿತ್ತು. ತೋಟದಲ್ಲಿ ಕೆಲಸ ಮಾಡುವಾಗ ಕಾವಲುಗಾರ ಮುರುಗೇಶ್, ಮಹದೇವಯ್ಯನವರ ವಿಶ್ವಾಸ ಗಳಿಸಿದ್ದ. ಜಮೀನು ಮಾರಿರುವ ಹಿನ್ನೆಲೆಯಲ್ಲಿ ಮಹದೇವಯ್ಯ ಬಳಿ ಅಪಾರವಾದ ಹಣವಿದೆ ಎಂಬ ಮಾಹಿತಿ ಆತನಿಗೆ ಗೊತ್ತಿತ್ತು. ಹೀಗಾಗಿ ಕಿಡ್ನಾಪ್ ಮಾಡಿ, ಕೊಲೆ ಮಾಡಲಾಗಿತ್ತು. ಫೋನ್ ಬಳಕೆ ಮಾಡದ ಆರೋಪಿಗಳನ್ನು ಹಿಡಿಯುವುದು ಬಹಳ ಕಷ್ಟವಾಗಿತ್ತು. ಆದರೆ ಅದರಲ್ಲಿ ಒಬ್ಬ ಆರೋಪಿ, ಹಾವು ಕಚ್ಚಿದ್ದ ಮೇಲೆ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಗೆಂದು ದಾಖಲಾಗಿದ್ದಾನೆ. ಆಗ ಪೊಲೀಸರು ಬಂಧಿಸಲು ತೆರಳಿದ್ದ ವೇಳೆ ಪರಾರಿಯಾಗಲು ಯತ್ನಿಸಿ ಕೊನೆಗೆ ಸಿಕ್ಕಿಬಿದ್ದಿದ್ದಾನೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment