Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

200 ರೂಪಾಯಿ ಲಂಚದ ಆರೋಪ.. ಸತ್ತು 3 ವರ್ಷದ ಬಳಿಕ ನ್ಯಾಯ : ಮೈಸೂರಿನ ಮಹಿಳಾ ಅಧಿಕಾರಿಯ ಕಥೆ..ವ್ಯಥೆ..!

---Advertisement---

ಮೈಸೂರು: ಪ್ರಾಮಾಣಿಕ ಅಧಿಕಾರಿ‌ ಮಾಲಿನಿ ಅವರ ವಿಚಾರ ಈಗ ಮತ್ತೆ ಚರ್ಚೆಗೆ ಬಂದಿದೆ. ಆದರೆ ಅವರೇ ಬದುಕಿಲ್ಲ. ಅವರು ಸತ್ತ ಮೂರು ವರ್ಷದ ಬಳಿಕ ಅವರಿಗೆ ಬರಬೇಕಾದ ಬಾಕಿ ಹಣ ಬಿಡುಗಡೆಯಾಗಿರುವುದು ಮಾತ್ರ ವಿಪರ್ಯಾಸ. ಏನು ತಪ್ಪೇ ಮಾಡದ ಮಾಲಿನಿ ಮೇಲೆ 200 ರೂಪಾಯಿ ಲಂಚದ ಆರೋಪ ಕೇಳಿ ಬಂದಿತ್ತು. ಇದರಿಂದ ಸತತ 17 ವರ್ಷಗಳ ಕಾಲ ನ್ಯಾಯಕ್ಕಾಗಿ ಹೋರಾಟ ಮಾಡಿದ್ದಂತ ಮಹಿಳಾ ಅಧಿಕಾರಿ ಇವರು.

ಮಾಲಿನಿ ಮೈಸೂರಿನ ತಾಲೂಕು ಕಚೇರಿಯಲ್ಲಿ ಪ್ರಥಮ ದರ್ಜರ ಸಹಾಯಕಿಯಾಗಿ ಸೇವೆ ಸಲ್ಲಿಸುತ್ತಿದ್ದರು. 2007ರ ಸಮಯ. ಅಲ್ಪಸಂಖ್ಯಾತರ ಪ್ರಮಾಣ ಪತ್ರ ನೀಡುವ ವಿಚಾರದಲ್ಲಿ ನಿಯಮಾನುಸಾರ ಅರ್ಜಿ ತಿರಸ್ಕರಿಸಲಾಗಿತ್ತು. ಬಳಿಕ ಲೋಕಾಯುಕ್ತ ದಾಳಿ ನಡೆದಿತ್ತು. ಈ ಸಂದರ್ಭದಲ್ಲಿ ಈ ಪ್ರಕರಣ ತೀವ್ರತೆಯನ್ನು ಪಡೆದುಕೊಂಡಿತ್ತು. ಆ ಲಂಚವನ್ನು ಸ್ವೀಕರಿಸಿದ್ದವರು ಬೇರೆಯವರಾಗಿದ್ದರು. ಆದರೆ ತನಿಖೆಯಲ್ಲಿ ಮಾಲಿನಿ ಅವರನ್ನು ಸಹ ಆರೋಪಿಯಾಗಿ ಸೇರಿಸಲಾಗಿತ್ತು.

ಈ ಬೆಳವಣಿಗೆಯ ನಡುವೆ ಅವರನ್ನು 2007ರಲ್ಲಿ ಕೆಲಸದಿಂದ ವಜಾ ಮಾಡಲಾಗಿತ್ತು. ಸ್ಥಳೀಯ ಕೋರ್ಟ್ ಕೂಡ ಅವರನ್ನು ಅಪರಾಧಿ ಎಂದೇ ಘೋಷಣೆ‌ ಮಾಡಿತ್ತು. ಸಾಕಷ್ಟು ವರ್ಷಗಳು ತಾವೂ ನಿರಪರಾಧಿ ಅಂತ ಪ್ರೂವ್ ಮಾಡಿಕೊಳ್ಳುವುದಕ್ಕೆ ಹೋರಾಟಗಳು ನಡೆದಿದ್ದವು. 2012ರಲ್ಲಿ ಹೈಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಮಾಲಿನಿ ವಿರುದ್ಧ ಯಾವುದೇ ಪುರಾವೆಗಳಿರಲಿಲ್ಲ. ಆದರೆ ಇದರಿಂದ ಮಾನಸಿಕವಾಗಿ‌ ನೊಂದಿದ್ದ ಮಾಲಿನಿ, ಅನಾರೋಗ್ಯಕ್ಕೀಡಾದರೂ. 2023ರಲ್ಲಿ ನಿಧನರಾದರು. ಇದೀಗ ಅವರಿಗೆ ಸಲ್ಲಬೇಕಾದ ಭತ್ಯೆಗಳು ಮೂರು ವರ್ಷವಾದ ಬಳಿಕ ಸಿಕ್ಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now