ಬ್ಯಾಂಕ್ ನಿಂದ ಸಾಲ ಪಡೆದ ಆರೋಪ : ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು..!

suddionenews
1 Min Read

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್ ನ ಮ್ಯಾನೇಜರ್ ರಾಜಣ್ಣ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ವಿರುದ್ಧ ದೂರು ದಾಖಲಿಸಿದ್ದಾರೆ.

ಅಪೇಕ್ಸ್ ಬ್ಯಾಂಕ್ ನಿಂದ ಸಾಲ ಪಡೆದ ಆರೋಪ್ ಮೇಲೆ ದೂರು ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಎ1 ಆರೋಪಿಯಾಗಿದ್ದಾರೆ. ಈ ಸಂಬಂಧ 420 ಕೇಸ್ ದಾಖಲಾಗಿದೆ. ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಅಪೇಕ್ಸ್ ಬ್ಯಾಂಕ್ ನಲ್ಲಿ 2013ರಿಂದ 2017 ರವರೆಗೂ 232 ಕೋಟಿ 88 ಲಕ್ಷ ರೂಪಾಯಿ ಸಾಲ ಮಂಜೂರು ಮಾಡಲಾಗಿತ್ತು. ಆದರೆ ಈ ಸಾಲವನ್ನು ಬ್ಯಾಂಕ್ ಗೆ ವಾಪಾಸ್ ಮಾಡಿಲ್ಲ. ಇದು 2023ರ ವೇಳೆಗೆ 439 ಕೋಟಿ 7 ಲಕ್ಷ ಆಗಿದೆ. ಬ್ಯಾಂಕ್ ಗೆ ಮೋಸ ಮಾಡಿದ್ದಾರೆಂದು ಆರೋಪಿಸಿ, ದೂರು ದಾಖಲು ಮಾಡಲಾಗಿದೆ.

 

ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ಹಾಗೂ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್​ನ ಇಬ್ಬರು ಪದಾಧಿಕಾರಿಗಳ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದೆ. ಬೆಳಗಾವಿಯ ಗೋಕಾಕ್​ನ ಶುಗರ್ ಫ್ಯಾಕ್ಟರಿಯಾದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಹಾಗೂ ವಿಸ್ತರಣೆ ನಿರ್ವಹಣೆಗಾಗಿ ಸಾಲ ಪಡೆದಿದ್ದರು.

Share This Article
Leave a Comment

Leave a Reply

Your email address will not be published. Required fields are marked *