ಬಡ ರೋಗಿಯಿಂದ ಲಂಚ ಪಡೆದ ಆರೋಪ : ವೈದ್ಯರ ವಿರುದ್ಧ ಕ್ರಮಕ್ಕೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಬಡ ರೋಗಿಯೋರ್ವರಿಂದ ಲಂಚ ಸ್ವೀಕರಿಸಿರುವ ಜಿಲ್ಲಾಸ್ಪತ್ರೆಯ ಡಾ.ಸಾಲಿಮಂಜಪ್ಪರವರನ್ನು ಸೇವೆಯಿಂದ ಅಮಾನತ್ತುಗೊಳಿಸುವಂತೆ ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿ ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರೋಗಿಯೊಬ್ಬರಿಂದ ಡಾ.ಸಾಲಿಮಂಜಪ್ಪ ಲಂಚ ಸ್ವೀಕರಿಸುತ್ತಿರುವ ವೀಡಿಯೋ ವೈರಲ್ ಆಗಿದ್ದು, ತಕ್ಷಣವೇ ಸೇವೆಯಿಂದ ಅಮಾನತ್ತುಗೊಳಿಸಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿದರು.

ಕರ್ನಾಟಕ ಯುವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಂ.ಎಸ್.ಸುನೀಲ್, ಜಿಲ್ಲಾಧ್ಯಕ್ಷ ಮೋಹನ್‌ಕುಮಾರ್, ಮಧ್ಯ ಕರ್ನಾಟಕದ ಅಧ್ಯಕ್ಷ ಮುರಳಿಧರ್, ರಾಜ್ಯ ಕಾರ್ಯದರ್ಶಿ ಭಾನುಪ್ರಿಯ, ಪ್ರಧಾನ ಕಾರ್ಯದರ್ಶಿ ಮಂಜು, ಕಾರ್ಯಾಧ್ಯಕ್ಷ ಮಣಿಕಂಠ, ಜಿಲ್ಲೆಯ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪ್ರತಿಭಟನೆಯಲ್ಲಿದ್ದರು.

Share This Article
Leave a Comment

Leave a Reply

Your email address will not be published. Required fields are marked *