ಬಡ ರೋಗಿಯಿಂದ ಲಂಚ ಪಡೆದ ಆರೋಪ : ವೈದ್ಯರ ವಿರುದ್ಧ ಕ್ರಮಕ್ಕೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರ ಒತ್ತಾಯ

1 Min Read

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಕರ್ತವ್ಯದ ವೇಳೆಯಲ್ಲಿಯೇ ಬಡ ರೋಗಿಯೊಬ್ಬರಿಂದ ಲಂಚ ಪಡೆದಿರುವ ಜಿಲ್ಲಾಸ್ಪತ್ರೆಯ ಡಾ.ಸಾಲಿಮಂಜಪ್ಪ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆ ಮಾಡಲು ಸಂಬಂಧಿಕರಿಂದ ನಾಲ್ಕು ಸಾವಿರ ರೂ.ಗಳ ಲಂಚ ಪಡೆಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ಖಾಸಗಿ ಆರ್.ಎಸ್.ಹೆಲ್ತ್ ಕೇರ್ ಸೆಂಟರ್‌ನಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಇವರು ಗಳಿಸಿರುವ ಆಸ್ತಿಯ ತನಿಖೆ ನಡೆಸಬೇಕೆಂದು ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.
ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷ ಓಬಳೇಶ್ ಟಿ. ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಸುಶೀಲಮ್ಮ, ವಿಜಯಲಕ್ಷ್ಮಿ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share This Article
Leave a Comment

Leave a Reply

Your email address will not be published. Required fields are marked *