ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ.25 : ಕರ್ತವ್ಯದ ವೇಳೆಯಲ್ಲಿಯೇ ಬಡ ರೋಗಿಯೊಬ್ಬರಿಂದ ಲಂಚ ಪಡೆದಿರುವ ಜಿಲ್ಲಾಸ್ಪತ್ರೆಯ ಡಾ.ಸಾಲಿಮಂಜಪ್ಪ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ರೋಗಿಯೊಬ್ಬರಿಗೆ ಶಸ್ತ್ರ ಚಿಕಿತ್ಸೆ ಮಾಡಲು ಸಂಬಂಧಿಕರಿಂದ ನಾಲ್ಕು ಸಾವಿರ ರೂ.ಗಳ ಲಂಚ ಪಡೆಯುತ್ತಿರುವ ವೀಡಿಯೋ ವೈರಲ್ ಆಗಿದ್ದು, ಖಾಸಗಿ ಆರ್.ಎಸ್.ಹೆಲ್ತ್ ಕೇರ್ ಸೆಂಟರ್ನಲ್ಲಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಕ್ರಮವಾಗಿ ಇವರು ಗಳಿಸಿರುವ ಆಸ್ತಿಯ ತನಿಖೆ ನಡೆಸಬೇಕೆಂದು ಪ್ರಜಾ ಕಲ್ಯಾಣ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು.
ಪ್ರಜಾ ಕಲ್ಯಾಣ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಹರೀಶ್ ಟಿ.ಎನ್. ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ಉಪಾಧ್ಯಕ್ಷ ಓಬಳೇಶ್ ಟಿ. ಸಂಘಟನಾ ಕಾರ್ಯದರ್ಶಿ ಪೂಜಾರಿ ಕರಿಯಪ್ಪ, ಸುಶೀಲಮ್ಮ, ವಿಜಯಲಕ್ಷ್ಮಿ ಇವರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











