ಶಿಕ್ಷಣದಿಂದ ಮಾತ್ರ ಸಾಧನೆ ಸಾಧ್ಯ : ಶೇಖರಗೌಡ ಮಾಲಿ ಪಾಟೀಲ್

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್,ಚಿತ್ರದುರ್ಗ ಮೇ. 29 :  ಶಿಕ್ಷಣದಿಂದ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯವಿದೆ. ಶಿಕ್ಷಣವನ್ನು ಪಡೆದರೆ ಮಾತ್ರ ಜೀವನದಲ್ಲಿ ಮೇಲಕ್ಕೆ ಏರಲು ಸಾಧ್ಯವಿದೆ ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ರಾಜ್ಯಾಧ್ಯಕ್ಷರಾದ ಶೇಖರಗೌಡ ಮಾಲಿ ಪಾಟೀಲ್ ತಿಳಿಸಿದರು.

ನಗರದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ನಡೆದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಸಮಾಜದ ಸಂಘಟನೆಗಾಗಿ ಪ್ರವಾಸವನ್ನು ಮಾಡುವುದರ ಮೂಲಕ ಸಂಘಟಿಸಲಾಗುತ್ತಿದೆ, ಇದಕ್ಕೆ ನಮ್ಮ ಸಮಾಜದ ಭಾಂಧವರು ಸಹಾಯ ಮತ್ತು ಸಹಕಾರವನ್ನು ನೀಡಬೇಕಿದೆ, ಈಗಾಗಲೇ 18 ಜಿಲ್ಲೆಗಳಲ್ಲಿ ನಮ್ಮ ಸಮಾಜದ ಸಂಘಟನೆ ಇದೆ ಅಲ್ಲಿ ನಮ್ಮ ಸಮಾಜ ಬೆಳೆಯುತ್ತಿದೆ.

ಚಿತ್ರದುರ್ಗದಲ್ಲಿಯೂ ಸಹಾ ನಮ್ಮ ಸಮಾಜ ಉತ್ತಮವಾದ ಸಂಘಟನೆಯಾಗುತ್ತಿದೆ, ನಮ್ಮ ಸಮಾಜದೊಂದಿಗೆ ಇತರೆ ಸಮಾಜದವರನ್ನು ಸಹಾ ಜೊತೆಯಲ್ಲಿ ಕರೆದ್ಯೂಯಲಾಗುತ್ತಿದೆ, ನಮ್ಮ ಸಮಾಜದಲ್ಲಿನ ಬಡವರಿಗೆ ಸಹಾಯವನ್ನು ಮಾಡುವ ಮನೋಭಾವವನ್ನು ಬೆಳಸಿಕೊಳ್ಳುವಂತೆ ಕರೆ ನೀಡಿದರು.

ಹೇಮರೆಡ್ಡಿ ಮಲ್ಲಮ್ಮ ಸ್ವಾಧಿಯಾಗಿ ಸಮಾಜವನ್ನು ಮುನ್ನಡೆಸಿದ್ದಾರೆ. ಮಲ್ಲಿಕಾರ್ಜನನಲ್ಲಿ ನಮ್ಮ ಸಮಾಜದ ಪರವಾಗಿ ವರವನ್ನು ಪಡೆಯುವುದರ ಮೂಲಕ ದಾರಿ ದೀಪವಾಗಿದ್ದಾರೆ. ತನಗೆ ಕಿರುಕುಳವನ್ನು ನೀಡಿದವರಿಗೂ ಸಹಾ ಒಳ್ಳೆಯದಾಗಲಿ ಎಂದು ಭಗವಂತನಲ್ಲಿ ಕೇಳಿದ ಸಾಧ್ವಿ ಹೇಮರೆಡ್ಡಿ ಮಲ್ಲಮ್ಮ ಎಂದ ಅವರು, ಸಮಾಜದವತಿಯಿಂದ ಈ ರೀತಿಯ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ಸಮಾಜದ ಸಂಘಟನೆಯನ್ನು ಮಾಡಬೇಕಿದೆ.

ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧನೆ ಮಾಡಲು ಸಾಧ್ಯವಿದೆ, ಈ ಹಿನ್ನಲೆಯಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕಿದೆ, ಕಲಿತರೆ ಮಾತ್ರ ನಮ್ಮ ಬದುಕು ಉತ್ತಮವಾಗಿ ರೂಪುಗೊಳ್ಳಲು ಸಾಧ್ಯವಿದೆ ಎಂದು ಪಾಟೀಲ್ ತಿಳಿಸಿದರು.

ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಗೌರವಾಧ್ಯಕ್ಷರಾದ ನಾಗೀರೆಡ್ಡಿ ಮಾತನಾಡಿ, ಹಿಂದಿನ ದಿನದಲ್ಲಿ ನಮ್ಮ ಸಮಾಜ ಕಳೆದು ಹೋಗುತ್ತಿತ್ತು ಆದರೆ ಈಗ ಸಮಾಜವನ್ನು ಸಂಘಟಿಸಲಾಗುತ್ತಿದೆ. ನಾವು ಇದುವರೆವಿಗೂ ಬೇರೆಯವರ ಆಶ್ರಯದಲ್ಲಿ ಇದ್ದವೆ ಆದರೆ ಈಗ ನಾವು ಸ್ವತಂತ್ರವಾಗಿ ನಮ್ಮದೇ ಸಮಾಜ ಇದೆ ಎಂದು ತಿಳಿದಿದ್ದು ಅದನ್ನು ಸಂಘಟಿಸಲಾಗುತ್ತಿದೆ ಎಂದ ಅವರು, ಮಲ್ಲಮ್ಮ 600 ವರ್ಷಗಳ ಹಿಂದೆಯೇ ನಮ್ಮ ಸಮಾಜವನ್ನು ಸಂಘಟಿಸುವುದರ ಮೂಲಕ ಒಗ್ಗಟ್ಟನ್ನು ಪ್ರದರ್ಶನ ಮಾಡಿದರು. ಮಲ್ಲಕಾರ್ಜನ ಪರಮ ಭಕ್ತೆಯಾಗಿ ಅತನನ್ನು ಸಾಕ್ಷಾತ್ಕಾರ ಮಾಡಿಸಿಕೊಂಡು ನಮ್ಮ ಸಮಾಜವನ್ನು ಮುನ್ನಡೆಸಿದ್ದಾರೆ. ನಮ್ಮಲ್ಲಿ ಶೈವ ಮತ್ತು ವೈಷ್ಣವ ಪಂಥವನ್ನು ನಾವು ಅನುಸರಿಸುತ್ತೇವೆ, ತಿರುಪತಿ ತಿಮ್ಮಪ್ಪ ನಮ್ಮ ಸಮಾಜದ ಮನದೇವರಾಗಿದ್ದಾರೆ, ಇದ್ದಲ್ಲದೆ ಮಲ್ಲಿಕಾರ್ಜನನ್ನು ಸಹಾ ಆರಾಧನೆ ಮಾಡುತ್ತೇವೆ ನಮ್ಮ ಮಕ್ಕಳಿಗೆ ಸಮಾಜದ ಬಗ್ಗೆ ತಿಳಿಸುವ ಕಾರ್ಯವನ್ನು ಮಾಡಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಂದು ಶ್ರೀ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ಅಧ್ಯಕ್ಷರಾದ ಚಿದಾನಂದಪ್ಪ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಶಾಲಾ ತನಿಖಾಧಿಕಾರಿಗಳಾದ ಶಿವಪ್ರಸಾದ್ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ರವರ ಬಗ್ಗೆ ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿ ಉತ್ತೀರ್ಣರಾದ ಸಮಾಜದ ಮಕ್ಕಳನ್ನು ಸನ್ಮಾನಿಸಲಾಯಿತು.

ಶ್ರೀಮತಿ ಗೀತಾ, ಜಯಶೀಲ, ರಶ್ಮಿ ಪ್ರಾರ್ಥಿಸಿದರೆ, ಮಲ್ಲಿಕಾರ್ಜನಯ್ಯ ಸ್ವಾಗತಿಸಿದರು, ಶಿವಾನಂದಪ್ಪ ಪ್ರಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ್ ವಂದಿಸಿದರು. ನಾಗರಾಜ್ ಸಂಗಮ್ ಕಾರ್ಯಕ್ರಮ ನಿರೂಪಿಸಿದರು.

suddionenews

Recent Posts

ಬೆಂಡೆಕಾಯಿ – ನಿಂಬೆ ರಸದ ಅದ್ಭುತ ಆರೋಗ್ಯ ಪ್ರಯೋಜನಗಳೇನು ಗೊತ್ತಾ ?

ಸುದ್ದಿಒನ್ : ಬೆಳಿಗ್ಗೆ ಬೆಂಡೆಕಾಯಿ-ನಿಂಬೆ ರಸ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ಬೆಂಡೆಕಾಯಿಯಲ್ಲಿರುವ ಫೈಬರ್, ನಿಂಬೆ ರಸದಲ್ಲಿರುವ ವಿಟಮಿನ್ ಸಿ…

3 hours ago

ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ

ಈ ರಾಶಿಯ ಇಷ್ಟಪಟ್ಟವರ ಮನಸ್ಸು ಚಂಚಲ ಈ ರಾಶಿಯವರು ಎಷ್ಟೇ ಮನೆ ಬದಲಾಯಿಸಿದರು ಅದೃಷ್ಟ ಕೈಹಿಡಿಯಲಿಲ್ಲ , ಸೋಮವಾರದ ರಾಶಿ…

4 hours ago

ಸುಳ್ಳಾದ ಐಐಟಿ ಬಾಬಾ ಭವಿಷ್ಯವಾಣಿ : ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಖಂಡನೆ

  ಸುದ್ದಿಒನ್ ಮಹಾ ಕುಂಭ ಮೇಳದಿಂದ ಪ್ರಸಿದ್ಧರಾದ ಐಐಟಿ ಬಾಬಾ ಈಗ ಇಂಟರ್ನೆಟ್ ಸೆನ್ಸೇಶನ್. ಅವರ ಸಂದರ್ಶನಗಳು ಮತ್ತು ಪಾಡ್‌ಕಾಸ್ಟ್‌ಗಳ…

11 hours ago

ವಿರಾಟ್ ಕೊಹ್ಲಿ ಸೂಪರ್ ಸೆಂಚುರಿ : ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸಿದ ಭಾರತ

  ಸುದ್ದಿಒನ್ ಚಾಂಪಿಯನ್ಸ್ ಟ್ರೋಫಿಯ ಎರಡನೇ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು 6 ವಿಕೆಟ್‌ಗಳಿಂದ ಹೀನಾಯವಾಗಿ ಸೋಲಿಸಿತು. ಇದರೊಂದಿಗೆ, ತಂಡವು 2017…

12 hours ago

ಕಬೀರಾನಂದಾಶ್ರಮಕ್ಕೆ ಯಾವುದೆ ಜಾತಿ, ಧರ್ಮ ಇಲ್ಲ, ಎಲ್ಲರೂ ಸಮಾನರು : ಡಾ.ಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…

12 hours ago

ಸಚಿನ್ ದಾಖಲೆ ಮುರಿದ ಕಿಂಗ್ ಕೊಹ್ಲಿ : ವಿಶೇಷತೆ ಏನು ಗೊತ್ತಾ?

  ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…

13 hours ago