Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ : ಮುಖ್ಯ ಶಿಕ್ಷಕನ ಅಮಾನತು

Facebook
Twitter
Telegram
WhatsApp

ಚಿತ್ರದುರ್ಗ: ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕನನ್ನು ಅಮಾನತು ಮಾಡಿ, ಆದೇಶ ಹೊರಡಿಸಲಾಗಿದೆ. ಜೋಡಿಚಿಕ್ಕೇನಹಳ್ಳಿ ಮುಖ್ಯ ಶಿಕ್ಷಕ ರಂಗಸ್ವಾಮಿಯನ್ನು ಅಮಾನತು ಮಾಡಿ, ಡಿಡಿಪಿಐ ರವಿಶಂಕರ ರೆಡ್ಡಿ ಆದೇಶ ಹೊರಡಿಸಿದ್ದಾರೆ.

ದಸರಾ ಹಬ್ಬದ ರಜೆಯಲ್ಲಿದ್ದ ಮಕ್ಕಳು ರಜೆ ಮುಗಿಸಿ ಖುಷಿಯಿಂದಾನೇ ಶಾಲೆಗಳಿಗೆ ಮರಳಿದ್ದರು. ಜೋಡಿಚಿಕ್ಕೇನಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಸ್ವಚ್ಛತೆಯ ಕೆಲಸ ಮಾಡಲು ಸೂಚಿಸಿದ್ದಾರೆ. ಈ ವೇಳೆ ಶೌಚಾಲಯ ತೊಳೆಯಲು ಸೂಚನೆ ನೀಡಲಾಗಿದೆ. ಈ ವೇಳೆ ಸಿಂಚನಾ ಶೌಚಾಲಯ ತೊಳೆಯುತ್ತಿರುವುದನ್ನು ನೋಡಲು ಹೋಗಿದ್ದಾಳೆ. ಇಷ್ಟಕ್ಕೆ ಕೋಪಗೊಂಡ, ಶಿಕ್ಷಕ ರಂಗಸ್ವಾಮಿ, ಶೌಚಾಲಯ ತೊಳೆಯಲು ಇಟ್ಟಿದ್ದ ಆ್ಯಸಿಡ್ ತೆಗೆದುಕೊಂಡು ಸಿಂಚನಾ ಮೇಲೆ ಎಸೆದಿದ್ದಾರೆ.

ಇದರ ಪರಿಣಾಮ ಸಿಂಚನಾ ಬೆನ್ನಿಗೆ ಗಾಯವಾಗಿದೆ. ತಕ್ಷಣ‌ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ರಂಗಸ್ವಾಮಿ ಅವರೇ ಆಸ್ಪತ್ರೆಗೂ ಸೇರಿಸಿದ್ದರು. ಇದರಲ್ಲಿ ಯಾವುದೇ ದುರುದ್ದೇಶವಿಲ್ಲ. ಪಾಕೇಟ್ ಕಟ್ ಮಾಡಿದ್ದಾಗ, ಸಿಂಚನಾ ಮೇಲೆ ಬಿದ್ದಿದೆ ಅಷ್ಟೇ ಎಂದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಶಿಕ್ಷಕ ರಂಗಸ್ವಾಮಿ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು. ಮಗಳಿಗೆ ಈ ರೀತಿ ಮಾಡಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಸಿಂಚನಾ ಪೋಷಕರು ಒತ್ತಾಯಿಸಿದ್ದರು. ಇದೀಗ ಮುಖ್ಯ ಶಿಕ್ಷಕ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ, ಆದೇಶ ಹೊರಡಿಸಿದ್ದಾರೆ. ಸಿಂಚನಾ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಜೆ ಮುಗಿಸಿಕೊಂಡು ಸರ್ಕಾರಿ ಶಾಲೆಗಳಿಗೆ ತೆರಳುವ ಮಕ್ಕಳ ಕೈಯಿಂದಾನೇ ಸ್ವಚ್ಚತೆ ಮಾಡಿಸುವುದು ಸಾಮಾನ್ಯ. ಆದರೆ ಮಕ್ಕಳಿಂದ ಸಾಧ್ಯವಾಗದೆ ಇರುವ ಕೆಲಸವನ್ನು ಶಿಕ್ಷಕರು ಮಾಡಿಸುವುದು ಅಪಾಯಕ್ಕೆ ಕಾರಣವಾಗುತ್ತದೆ. ಶೌಚಾಲಯದ ಸ್ವಚ್ಛತೆ ಮಕ್ಕಳಿಂದ ಸಾಧ್ಯವಾ ಎಂಬುದನ್ನು ಶಿಕ್ಷಕರು ಯೋಚನೆ ಮಾಡಬೇಕಾಗುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!