Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಮಮಂದಿರ ಉದ್ಘಾಟನೆ ದಿನವೇ ಮಕ್ಕಳಿಗೆ ಹೆಸರಿಡಲಿದ್ದಾರೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ

---Advertisement---

 

ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ದಿನಕ್ಕೋಸ್ಕರ  ಕೋಟ್ಯಾಂತರ ಜನರು ಕಾಯುತ್ತಿದ್ದಾರೆ. ಎಷ್ಟೋ ಗರ್ಭಿಣಿಯರು ಅಂದೇ ಹೆರಿಗೆ ಮಾಡಿಸಬೇಕೆಂಬ ಬೇಡಿಕೆ ಇಟ್ಟಿದ್ದಾರೆ. ಇದರ ಬೆನ್ನಲ್ಲೇ ಸ್ಯಾಂಡಲ್ ವುಡ್ ಆಕ್ಷನ್ ಫ್ರಿನ್ಸ್ ಧ್ರುವ ಸರ್ಜಾ ಕೂಡ ತಮ್ಮ ಮಕ್ಕಳಿಗೆ ಅಂದೇ ನಾಮಕರಣ ಮಾಡಲು ನಿರ್ಧರಿಸಿದ್ದಾರೆ.

ಧ್ರುವ ಮತ್ತು ಪ್ರೇರಣಾ ದಂಪತಿಗೆ ಇಬ್ಬರು ಮಕ್ಕಳು ಒಂದು ಹೆಣ್ಣು, ಒಂದು ಗಂಡು. ಎರಡು ಮಕ್ಕಳಿಗೆ ಇನ್ನು ಹೆಸರಿಟ್ಟಿಲ್ಲ. ಆದರೆ ಈಗ ಒಂದು ವಿಶೇಷ ದಿನವನ್ನು ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅದುವೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ದಿನ. ಎರಡು ಮಕ್ಕಳಿಗೆ ರಾಮಾಯಣ ಹಾಗೂ ಮಹಾಭಾರತ ಕಾವ್ಯಗಳ ಹೆಸರನ್ನು ಇಡಲು ನಿರ್ಧಾರ ಮಾಡಲಾಗಿದೆಯಂತೆ.

ಧ್ರುವ ಸರ್ಜಾ ಸದ್ಯ ಎರಡು ಸಿನಿಮಾಗಳಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಕೆಡಿ ಹಾಗೂ ಮಾರ್ಟಿನ್ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಜನತೆ ಈ ಎರಡು ಸಿನಿಮಾಗಾಗಿ ಕಾಯುತ್ತಾ ಇದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment