Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾಸಗಿ ಶಾಲೆಗಳಲ್ಲಿ ಕನ್ನಡ ಕಲಿಸದೆ ಇದ್ದರೆ ಕ್ರಮ : ಮಧು ಬಂಗಾರಪ್ಪ

---Advertisement---

ಬೆಳಗಾವಿ: ಕನ್ನಡ ಕಡ್ಡಾಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ನಿರ್ಧಾರವನ್ನ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಮಾದರಿ ಬೋರ್ಡ್ ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೆ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ಸಂದರ್ಭದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್, ರಾಜ್ಯದಲ್ಲಿ ICSE, CBSE, IB, IGCS ಸೇರಿದಂತೆ ಅಂತರಾಷ್ಟ್ರೀಯ ಶಾಲೆಗಳಲ್ಲಿ ಕಡ್ಡಾಯ ಭಾಷೆ ಕಲಿಕೆ ನಿಯಮ ಜಾರಿ ಮಾಡಿಲ್ಲ. ನಿಯಮಗಳು ಅನೇಕ ಶಾಲೆಗಳು ಜಾರಿ ಮಾಡಿಲ್ಲ. ಸರ್ಕಾರದ ನಿಯಮವನ್ನು ಖಾಸಗಿ ಶಾಲೆಗಳು ಉಲ್ಲಂಘನೆ ಮಾಡಲಾಗಿದೆ. ಶಿಕ್ಷಣ ಇಲಾಖೆ ಈ ಸಂಬಂಧ ಕೇವಲ ನೋಟೀಸ್ ಕೊಡಲಾಗಿದೆ. ಇಂತಹ ಶಾಲೆಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಅಂತ ಆಗ್ರಹ ಕೂಡ ಮಾಡಿದರು.

ರವಿಕುಮಾರ್ ಅವರ ಪ್ರಶ್ನೆಗೆ ಮಧು ಬಂಗಾರಪ್ಪ ಉತ್ತರ ನೀಡಿದ್ದಾರೆ. ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಅಂತ ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡವನ್ನು ಕಲಿಸದೆ ಹೋದರೆ ಅಂತಹ ಶಾಲೆ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಸೋಫಿಯಾ ಶಾಲೆ ಮೇಲೆ ಆರೋಪ ಬಂದಾಗ ಅಲ್ಲಿ ತನಿಖೆ ನಡೆಸಿದ್ದೇವೆ. ನಮ್ಮ ಗಮನಕ್ಕೆ ಈ ರೀತಿಯ ಲೋಪ ಇರುವುದು ಕಂಡು ಬಂದರೆ ತನಿಖೆ ನಡೆಸುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರು ಸಹ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಮಾತನ್ನ ಮಧು ಬಂಗಾರಪ್ಪ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ರೇಣುಕಾಸ್ವಾಮಿ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌: ಬೆದರಿಕೆ ಪ್ರಕರಣದ ಉದ್ಯಮಿ ಜೊತೆ ವಿಜಯಲಕ್ಷ್ಮಿ ಕಾಣಿಸಿಕೊಂಡಿದ್ದೇಕೆ?

ಏತ ನೀರಾವರಿ ಯೋಜನೆಗೆ ಭೂಮಿ ಪೂಜೆ: ಮಾಯಕೊಂಡ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದ ಬದ್ಧ : ಸಚಿವ ಎಸ್.ಎಸ್. ಮಲ್ಲಿಕಾರ್ಜುನ

ಕಾವ್ಯ ಬರೆಯುವುದು, ಕಟ್ಟುವುದು ಹೃದಯಕ್ಕೆ ಸಂಬಂಧಿಸಿದ ಕೆಲಸ: ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು : ಬೊಮ್ಮಾಯಿ

ಬಾಂಗ್ಲಾದೇಶದಲ್ಲಿ ನಿವೃತ್ತ ಶಿಕ್ಷಕ ಸೇರಿ ಒಂದೇ ಕುಟುಂಬದ ನಾಲ್ವರ ಸಾವು : ಮನೆಯಲ್ಲಿ ಮೃತದೇಹಗಳು ಪತ್ತೆ.!