ಭಾರತ್ ಜೋಡೋ ಪಾದಯಾತ್ರೆಯಲ್ಲಿ ಕಾರ್ಯಕರ್ತ ಸಾವು :  10 ಲಕ್ಷ ಪರಿಹಾರ : ಡಿಕೆ ಶಿವಕುಮಾರ್

0 Min Read

ಚಿತ್ರದುರ್ಗ : ಭಾರತ್ ಜೋಡೋ ಪಾದಯಾತ್ರೆ ವೇಳೆ ಸಾವನ್ನಪ್ಪಿದ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ ಕೆಪಿಸಿಸಿ ವತಿಯಿಂದ 10 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಚಳ್ಳಕೆರೆಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರ ಭಾರತ್ ಜೋಡೋ ಪಾದಯಾತ್ರೆಗೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉತ್ತರೆದಿಬ್ಬ ಗ್ರಾಮದಿಂದ  ಬಂದಿದ್ದ ಕಾಂಗ್ರೆಸ್ ಕಾರ್ಯಕರ್ತ  ರಮೇಶ್‌ ಅವರು ಭಾಗವಹಿಸಿ, ವಾಪಸ್ ಹೋಗುವಾಗ ಹಿರಿಯೂರಿನಲ್ಲಿ ನಡೆದ ಅಪಘಾತದಲ್ಲಿ ಸಾವಿಗೀಡಾಗಿದ್ದರು.
ನಮ್ಮ ಪಕ್ಷದ ಕಾರ್ಯಕರ್ತರು ಮೃತರ ಕುಟುಂಬಕ್ಕೆ ಭೇಟಿ ಸಾಂತ್ವನ ಹೇಳಲಿದ್ದಾರೆ. ಅವರ ಕುಟುಂಬದ ಜೊತೆ ನಾವಿದ್ದೇವೆ  ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *