Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟ ದರ್ಶನ್ ಈಗ ಸ್ವತಂತ್ರರು : ಹೈಕೋರ್ಟ್ ಹೇಳಿದ್ದೇನು..?

---Advertisement---

 

ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸಿಕ್ಕಿ ಹಾಕಿಕೊಂಡಿದ್ದರು. ಏಳು ತಿಂಗಳ ಬಳಿಕ ಷರತ್ತು ಬದ್ಧ ಜಾಮೀನು ಪಡೆದಿದ್ದ ದರ್ಶನ್ ಅವರಿಗೆ ಈಗ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಸ್ವತಂತ್ರ ಹಕ್ಕಿಯಾಗಿದ್ದಾರೆ. ಷರತ್ತು ಬದ್ಧ ಜಾಮೀನು ನೀಡಿದ್ದ ಕಾರಣ ಎಲ್ಲಿ ಹೋಗುವುದಕ್ಕೂ ಅನುಮತಿ ಇರಲಿಲ್ಲ. ಆದರೆ ಇದೀಗ ದರ್ಶನ್ ಗೆ ಕರ್ನಾಟಕ ಹೈಕೋರ್ಟ್ ನಿಯಮಗಳನ್ನ ಸಡಿಲಿಸಿದೆ. ಈಗ ಎಲ್ಲಿ ಬೇಕಾದರೂ ಕೋರ್ಟ್ ಅನುಮತಿ ಇಲ್ಲದೆ ತೆರಳಬಹುದಾಗಿದೆ. ಆದರೆ ವಿದೇಶಕ್ಕೆ ಹೋಗುವಾಗ ಅನುಮತಿ ಬೇಕೇ ಬೇಕಾಗಿದೆ.

ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಈ ಕುರಿತು ಆದೇಶ ನೀಡಿದ್ದು, ದರ್ಶನ್ ಬೆಂಗಳೂರು ಬಿಟ್ಟು ಹೋಗುವಾಗ ಇದ್ದಂತ ಷರತ್ತನ್ನು ಸಡಿಲಿಕೆ ಮಾಡಿದೆ. ಕೋರ್ಟ್ ವ್ಯಾಪ್ತಿ ಬಿಟ್ಟು ಎಲ್ಲಿಯೇ ಹೋಗಬೇಕು ಎಂದರು ಕೋರ್ಟ್ ಅನುಮತಿಯನ್ನು ಪಡೆಯಬೇಕಾಗಿತ್ತು. ಮೈಸೂರಿನ ತೋಟದ ಮನೆಗೆ ಹೋಗುವಾಗಲೂ ಕೋರ್ಟ್ ಅನುಮತಿ ಕೇಳಬೇಕಾಗಿತ್ತು. ಇದೀಗ ಆ ನಿಯಮವನ್ನು ಸಡಿಲಗೊಳಿಸಿದೆ.

ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಕಾರಣ, ದರ್ಶನ್ ಅಂಡ್ ಟೀಂ ರೇಣುಕಾಸ್ವಾಮಿಯನ್ನು ಕರೆಸಿ ಎಚ್ಚರಿಕೆ ನೀಡಲು ಮುಂದಾಗಿತ್ತು. ಆದರೆ ರೇಣುಕಾಸ್ವಾಮಿ ಕೊಲೆಯಾದ ಬಳಿಕ ಸಿನಿಮಾ ಸ್ಟೈಲ್ ನಲ್ಲಿ ಮೋರಿಗೆ ಎಸೆಯಲು ಹೋಗಿ ತಗಲಾಕಿಕೊಂಡಿದ್ದರು. ರೇಣುಕಾಸ್ವಾಮಿ ಕೊಲೆ ಆರೋಪ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಹದಿನೇಳು ಜನರ ಮೇಲಿತ್ತು. ಹದಿನೇಳು ಮಂದಿ ಜೈಲಿಗೂ ಹೋಗಿ ಬಂದಿದ್ದಾರೆ. ಜಾಮೀನಿನ ಮೇಲೆ ಹೊರ ಬಂದಿದ್ದು, ಕೋರ್ಟ್ ಕೇಸ್ ಇದ್ದಾಗ ಅಟೆಂಡ್ ಕೂಡ ಮಾಡುತ್ತಿದ್ದಾರೆ. ಇದೀಗ ದರ್ಶನ್ ಗೆ ಷರತ್ತನ್ನು ಸಡಿಲಿಸಿದೆ. ಹಾಗೇ ಮೊನ್ನೆಯಷ್ಟೇ ಪವಿತ್ರಾ ಗೌಡಗೂ ಷರತ್ತು ಸಡಿಲಿಕೆ ಮಾಡಿತ್ತು ಕೋರ್ಟ್.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment