ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿನ್ನೆಯಷ್ಟೇ ತಮ್ಮ 22ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನ ಆಚರಿಸಿಕೊಂಡಿದ್ದಾರೆ. ಹೆಂಡತಿ ಜೊತೆಗೆ ಖುಷಿ ಖುಷಿಯಾಗಿ ಸಮಯ ಕಳೆದಿದ್ದಾರೆ. ಅವರ ಅಭಿಮಾನಿಗಳು ಕೂಡ ಮನಸ್ಪೂರ್ತಿಯಾಗಿ ಹಾರೈಸಿದ್ದಾರೆ. ಸದಾ ಕಾಲ ಹೀಗೆ ನಗು ನಗುತ್ತಾ ಇರಿ, ಯಾರ ದೃಷ್ಟಿಯೂ ತಾಗದಿರಲಿ ಎಂದಿದ್ದಾರೆ. ಇದರ ನಡುವೆ ದರ್ಶನ್ ಮನಸ್ಸಿಗೆ ಬೇಸರವಾಗುವಂತ ಘಟನೆ ನಡೆದಿದೆ.
ದರ್ಶನ್ ಆಪ್ತರಾದಂತ ಹೊನ್ನೆಗೌಡ ಅವರು ನಿಧನರಾಗಿದ್ದಾರೆ. ಸುಮಾರು ವರ್ಷಗಳಿಂದ ದರ್ಶನ್ ಅವರ ಜೊತೆಗೆ ಕೆಲಸ ಮಾಡುತ್ತಿದ್ದವರು. ಇದ್ದಕ್ಕಿದ್ದ ಹಾಗೇ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನ ದರ್ಶನ್ ಅವರಿಗುಹ ನೋವು ತರಿಸಿದೆ. ಅವರ ಜೊತೆಗಿನ ಫೋಟೋ ಹಾಕಿ, ಸಂತಾಪ ಸೂಚಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಹಾಕಿದ ಕೂಡಲೇ ದರ್ಶನ್ ಅವರ ಅಭಿಮಾನಿಗಳು ಸಹ ಕಮೆಂಟ್ ಮೂಲಕ ಸಂತಾಪವನ್ನ ಸೂಚಿಸಿದ್ದಾರೆ.
’25 ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ’ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ 25 ವರ್ಷಗಳಿಂದ ದರ್ಶನ್ ಅವರಿಗೆ ಪರ್ಸನಲ್ ಮೇಕಪ್ ಮ್ಯಾನ್ ಆಗಿದ್ದವರು. ಅವರ ಸಿನಿಮಾಗಳಿಗೆ ಮೇಕಪ್ ಮಾಡುತ್ತಿದ್ದ ವ್ಯಕ್ತಿ ನಿಧನರಾಗಿದ್ದು, ಆ ನೋವು ದರ್ಶನ್ ಅವರನ್ನು ಕಾಡಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











