Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ್ಯಾಯಾಧೀಶರಿಗೆ ಪತ್ರ ಬರೆದ ನಟ ದರ್ಶನ್..!

Facebook
Twitter
Telegram
WhatsApp

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲೂಟದಿಂದ ಸೊರಗಿ ಹೋಗಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿದೆ. ಹೀಗಾಗಿಯೇ ದರ್ಶನ್ ಅವರಿಗೆ ಮನೆ ಊಟ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ಪುರಸ್ಕಾರ ಮಾಡಲಿಲ್ಲ. ಇತ್ತಿಚೆಗಷ್ಟೇ ಮನೆ ಊಟದ ಅರ್ಜಿಯನ್ನು ವಾಪಾಸ್ ಪಡೆದಿರುವ ದರ್ಶನ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇನ್ನು ದರ್ಶನ್ ಮನೆ ಊಟಕ್ಕಾಗಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ದೇಹಾರೋಗ್ಯಕ್ಕಾಗಿ ಮನವಿ ಮಾಡಿದ್ದಾರೆ. ‘ಈ ಮೇಲ್ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣಾ ಬಂಧಿ ಸಂಖ್ಯೆ 6106, ದರ್ಶನ್ ಎಸ್ ಆದ ನಾನು, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿಯಾಗಿದ್ದೇನೆ. ಕಳೆದ ಮೂರು ತಿಂಗಳ ಹಿಂದೆ ಮೂಳೆ ಸಂಬಂಧಿತ ಶಸ್ತ್ರ ಚಿಕಿತ್ಸೆಯಾಗಿದೆ. ಹಾಗೂ ದಿನನಿತ್ಯ ಕೆಲಸದ ನಿಮಿತ್ತ ಕಸರತ್ತು ನಡೆಸುತ್ತಿದ್ದೆ. ನನ್ನ ದೇಹಕ್ಕೆ ಪ್ರೋಟೀನ್, ಡಯೆಟ್ ಅವಶ್ಯಕತೆ ಇರುತ್ತದೆ.

ಕೇಂದ್ರ ಕಾರಾಗೃಹಕ್ಕೆ ದಾಖಲಾದ ದಿನದಿಂದ ನಾನು ಕಾರಾಗೃಹದಲ್ಲಿ ನೀಡಿದ ಆಹಾರ ಸೇವಿಸುತ್ತಿದ್ದು, ನನ್ನ ಆರೋಗ್ಯ ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನನ್ನ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಕಾರಾಗೃಹದಲ್ಲಿ ದೊರೆಯುವ ಆಹಾರದ ಜೊತೆಗೆ ಮಾನ್ಯರಲ್ಲಿ ಮನವಿ ಇರುವ ಆಹಾರವನ್ನು ನೀಡಬೇಕಾಗಿ ವಿನಂತಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ದರ್ಶನ್ ಅವರಿಗೆ ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಮನವಿ ಮಾಡಿದ್ದರು. ಉಳಿದ ಕೈದಿಗಳು ಅದೇ ರೀತಿ ಡಿಮ್ಯಾಂಡ್ ಇಟ್ಟರೆ ಏನು ಮಾಡಬೇಕು. ಜೈಲಿನಲ್ಲಿ ಗುಣಮಟ್ಟದ ಆಹಾರವನ್ನೇ ನೀಡಲಾಗುತ್ತಿದೆ ಎಂದು ಕೋರ್ಟ್ ಅರ್ಜಿ ತಿರಸ್ಕಾರ ಮಾಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕಾಂಗ್ರೆಸ್‍ನವರು ದಲಿತ ಪರ, ಅಹಿಂದ ಪರ ಎಂದು ತೋರ್ಪಡಿಕೆಗೆ ಹೇಳುವುದನ್ನು ನಿಲ್ಲಿಸಲಿ : ಬಾಳೆಕಾಯಿ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಸೆ. 17 : ಹಿಂದು ಧರ್ಮದಲ್ಲಿ ದಲಿತರನ್ನು ಸರಿಯಾದ ರೀತಿಯಲ್ಲಿ ನಡೆಸುತ್ತಿಲ್ಲ, ಅವರನ್ನು ಎಲ್ಲೂ ಸಹಾ

ರಸ್ತೆಯ ಬದಿಯ ಗುಂಡಿಗೆ ಬಿದ್ದ KSRTC ಬಸ್: ಮೂವರಿಗೆ ಗಂಭೀರ ಗಾಯ..!

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ : ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಗುಂಡಿಗೆ ಬಿದ್ದಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಸಾರ್ವಜನಿಕರಿಗೆ ಮಹತ್ವದ ಸೂಚನೆ ನೀಡಿದ ಬೆಸ್ಕಾಂ

ಚಿತ್ರದುರ್ಗ. ಸೆ.17: ಸೆ.28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಪ್ರಯುಕ್ತ ಚಿತ್ರದುರ್ಗ ನಗರದಲ್ಲಿ ಬೃಹತ್ ಶೋಭಾ ಯಾತ್ರೆ ಜರುಗಲಿದೆ. ಶೋಭಾ ಯಾತ್ರೆ ಮೆರವಣಿಗೆಯು ಚಳ್ಳಕೆರೆ ಗೇಟ್‌ನಿಂದ ಬಿ.ಡಿ.ರಸ್ತೆ ಮುಖಾಂತರ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆಯ

error: Content is protected !!