Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನ್ಯಾಯಾಧೀಶರಿಗೆ ಪತ್ರ ಬರೆದ ನಟ ದರ್ಶನ್..!

---Advertisement---

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲೂಟದಿಂದ ಸೊರಗಿ ಹೋಗಿದ್ದಾರೆ. ತೂಕವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿದೆ. ಹೀಗಾಗಿಯೇ ದರ್ಶನ್ ಅವರಿಗೆ ಮನೆ ಊಟ ನೀಡಬೇಕೆಂದು ಮನವಿ ಮಾಡಿದ್ದರು. ಆದರೆ ಕೋರ್ಟ್ ಈ ಅರ್ಜಿಯನ್ನು ಪುರಸ್ಕಾರ ಮಾಡಲಿಲ್ಲ. ಇತ್ತಿಚೆಗಷ್ಟೇ ಮನೆ ಊಟದ ಅರ್ಜಿಯನ್ನು ವಾಪಾಸ್ ಪಡೆದಿರುವ ದರ್ಶನ್ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲು ನಿರ್ಧರಿಸಿದ್ದಾರೆ.

ಇನ್ನು ದರ್ಶನ್ ಮನೆ ಊಟಕ್ಕಾಗಿ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ. ದೇಹಾರೋಗ್ಯಕ್ಕಾಗಿ ಮನವಿ ಮಾಡಿದ್ದಾರೆ. ‘ಈ ಮೇಲ್ಕಂಡ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣಾ ಬಂಧಿ ಸಂಖ್ಯೆ 6106, ದರ್ಶನ್ ಎಸ್ ಆದ ನಾನು, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಬಂಧಿಯಾಗಿದ್ದೇನೆ. ಕಳೆದ ಮೂರು ತಿಂಗಳ ಹಿಂದೆ ಮೂಳೆ ಸಂಬಂಧಿತ ಶಸ್ತ್ರ ಚಿಕಿತ್ಸೆಯಾಗಿದೆ. ಹಾಗೂ ದಿನನಿತ್ಯ ಕೆಲಸದ ನಿಮಿತ್ತ ಕಸರತ್ತು ನಡೆಸುತ್ತಿದ್ದೆ. ನನ್ನ ದೇಹಕ್ಕೆ ಪ್ರೋಟೀನ್, ಡಯೆಟ್ ಅವಶ್ಯಕತೆ ಇರುತ್ತದೆ.

ಕೇಂದ್ರ ಕಾರಾಗೃಹಕ್ಕೆ ದಾಖಲಾದ ದಿನದಿಂದ ನಾನು ಕಾರಾಗೃಹದಲ್ಲಿ ನೀಡಿದ ಆಹಾರ ಸೇವಿಸುತ್ತಿದ್ದು, ನನ್ನ ಆರೋಗ್ಯ ಮತ್ತು ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ನನ್ನ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಕಾರಾಗೃಹದಲ್ಲಿ ದೊರೆಯುವ ಆಹಾರದ ಜೊತೆಗೆ ಮಾನ್ಯರಲ್ಲಿ ಮನವಿ ಇರುವ ಆಹಾರವನ್ನು ನೀಡಬೇಕಾಗಿ ವಿನಂತಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ದರ್ಶನ್ ಅವರಿಗೆ ಮನೆ ಊಟ, ಹಾಸಿಗೆ, ಪುಸ್ತಕ ನೀಡುವಂತೆ ಮನವಿ ಮಾಡಿದ್ದರು. ಉಳಿದ ಕೈದಿಗಳು ಅದೇ ರೀತಿ ಡಿಮ್ಯಾಂಡ್ ಇಟ್ಟರೆ ಏನು ಮಾಡಬೇಕು. ಜೈಲಿನಲ್ಲಿ ಗುಣಮಟ್ಟದ ಆಹಾರವನ್ನೇ ನೀಡಲಾಗುತ್ತಿದೆ ಎಂದು ಕೋರ್ಟ್ ಅರ್ಜಿ ತಿರಸ್ಕಾರ ಮಾಡಿತ್ತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment