in ,

ಮಳೆಗೆ ನಟ ಜಗ್ಗೇಶ್ ಅವರ ಕಾಸ್ಟ್ಲೀ ಕಾರು ಮುಳುಗಡೆ : ಪೋಸ್ಟ್ ಮಾಡಿ ಏನಂದ್ರು..?

suddione whatsapp group join

 

 

ಬೆಂಗಳೂರು: ನಿನ್ನೆಯಿಂದ ರಾಜ್ಯಾದ್ಯಂತ ಜೋರು ಮಳೆಯಾಗಿದೆ. ಮಳೆಯಿಂದಾಗಿ ಸಿಲಿಕಾನ್ ಸಿಟಿಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಮರಗಿಡಗಳು ಬಿದ್ದು, ವಾಹನಗಳು ಜಖಂ ಆಗಿದೆ. ರಸ್ತೆಗಳೆಲ್ಲಾ ನೀರು ತುಂಬಿದೆ. ಕಾರು ಮುಳುಗಡೆಯಾಗಿ, ಒಬ್ಬ ಮಹಿಳೆ ಸಾವನ್ನಪ್ಪಿರುವ ಘಟನೆಯೂ ನಿನ್ನೆ ನಡೆದಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಬಿದ್ದ ಪರಿಣಾಮ ಅವಾಂತರ ಸೃಷ್ಟಿಯಾಗಿರುವುದು ಒಳದೆರಡಲ್ಲ. ಇದೀಗ ನಟ ಜಗ್ಗೇಶ್ ಅವರಿಗೂ ಮಳೆಯಿಂದ ಸಮಸ್ಯೆ ಉಂಟಾಗಿದೆ. ಅವರ ಕಾರೊಂದು ನೀರಲ್ಲಿ ಮುಳುಗಡೆಯಾಗಿದೆ. ಆ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.

“ನನ್ನ ಮನೆಯ ರಿಪೇರಿ ಕಾರ್ಯ ಪ್ರಯುಕ್ತ ನನ್ನ ರಸ್ತೆಯ ಸ್ನೇಹಿತ ಮುರಳಿ ಮನೆಯ ಸೆಲ್ಲಾರ್ ನಲ್ಲಿ ನಿಲ್ಲಿಸಿದ್ದ ನನ್ನ bmw5 ಕಾರು ಅಕಾಲಿಕ ಮಳೆ ನೀರಿನಲ್ಲಿ ಮುಳುಗಡೆ ಆಯಿತು..5hp motor ಬಳಸಿ ನೀರು ಹೊರಹಾಕಿಸಲಾಯಿತು.. ಇಂಥ ಅಲ್ಲಿಕಲ್ಲಿನ ಮಳೆ ಈ ತಿಂಗಳಲ್ಲಿ ಬಂದದ್ದು ಆಶ್ಚರ್ಯ” ಎಂದು ಟ್ಚೀಟ್ ಮಾಡಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರಿ ನೇಮಕ ರದ್ದು..!

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆವಿ ಪ್ರಭಾಕರ್ ನೇಮಕ