Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

10 ಎಕರೆಯಲ್ಲಿ ನಿರ್ಮಾಣವಾಗಿದ್ದ ನಟ ನಾಗಾರ್ಜುನ್ ಕಟ್ಟಡ ನೆಲಸಮ..!

Facebook
Twitter
Telegram
WhatsApp

ತೆಲಂಗಾಣ ಸರ್ಕಾರ ನಟ ಅಕ್ಕಿನೇನಿ ನಾಗಾರ್ಜುನ ಕುಟುಂಬಕ್ಕೆ ಶಾಕ್ ನೀಡಿದೆ. ಅಕ್ಕಿನೇನಿ ನಾಗಾರ್ಜುನ್ ಗೆ ಸಂಬಂಧಿಸಿದ 10 ಎಕರೆಯಲ್ಲಿ ನಿರ್ಮಾಣವಾಗಿದ್ದ ಕನ್ವೆನ್ಶನ್ ಹಾಲ್ ಅನ್ನು ಕೆಡವಿದ್ದಾರೆ. ಈ ಕಟ್ಟಡದ ಮೇಲೆ ದೂರುಗಳಿವೆ. ಅನೇಕ ರೀತಿಯ ಕಾನೂನುಗಳನ್ನು ಉಲ್ಲಂಘಿಸಿರುವ ಆರೋಪವಿದೆ. ಈ ಹಿನ್ನೆಲೆ ತೆಲಂಗಾಣ ಸರ್ಕಾರ ಕಟ್ಟಡವನ್ನು ಉರುಳಿಸಿದೆ. ತಮ್ಮಿಡು ಕುಂಟಾ‌ ಕೆರೆಯ ಬಳಿ ನಿರ್ಮಾಣವಾಗಿದ್ದ ಕನ್ವೆನ್ಷನ್ ಸೆಂಟರ್ ಇದಾಗಿತ್ತು.

ಅಕ್ಕಿನೇನಿ ನಾಗಾರ್ಜುನ್ ಕಟ್ಟಿದ ಹಾಲ್ ಹಲವು ಐಷರಾಮಿ ಕಾರ್ಯಕ್ರಮಗಳು ನಡೆಯುವುದಕ್ಕೆ ಸೂಕ್ಯವಾಗಿತ್ತು. ಆದರೆ ಈ ಸೆಂಟರ್ ಕಟ್ಟುವುದಕ್ಕೆ ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನೇ ಮುರಿದಿದ್ದರು. ಕಾರ್ಪೊರೇಟ್ ಮೀಟಿಂಗ್ ಗಳು ಸೇರಿದಂತೆ ದೊಡ್ಡ ದೊಡ್ಡವರ ಕಾರ್ಯಕ್ರಮಗಳು ನಡೆಯುತ್ತಿದ್ದವು. ಇದೀಗ ಕಟ್ಟಡ ನೆಲಸಮಗೊಂಡಿದ್ದು, ನಾಗಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ.

ಎನ್ ಕನ್ವೆನ್ಷನ್ ಹಾಲ್​ ಅನ್ನು ನೆಲಸಮಗೊಳಿಸಿದ್ದು ಅಕ್ಷರಶಃ ಕಾನೂನು ಬಾಹಿರ, ಕೋರ್ಟ್​​ನಿಂದ ಸ್ಟೇ ತಂದಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ. ಒಂದೇ ಒಂದು ನೋಟಿಸ್ ಕೂಡ ನೀಡದೆ ಬೆಳ್ಳಂ ಬೆಳಗ್ಗೆ ಕನ್ವೆನ್ಷನ್ ಹಾಲ್ ಅ​ನ್ನು ಧ್ವಂಸಗೊಳಿಸಲಾಗಿದೆ. ಒಂದೇ ಒಂದು ಇಂಚು ಜಾಗದಲ್ಲಿಯೂ ಅಕ್ರಮವಾಗಿ ಕಟ್ಟಡ ಕಟ್ಟಿಲ್ಲ. ಇದು ಅಕ್ಷರಶಃ ಕಾನೂನು ಬಾಹಿರ ನಡುವಳಿಕೆ ಎಂದು ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಇತ್ತಿಚೆಗಷ್ಟೇ ಅಕ್ಕಿನೇನಿ ಕುಟುಂಬದಲ್ಲಿ ಶುಭಕಾರ್ಯ ಕೂಡ ಜರುಗಿದೆ. ನಾಗಚೈತನ್ಯ ಮತ್ತೊಂದು ಹೊಸ ಬದುಕಿಗೆ ಹೆಜ್ಜೆ ಇಡುತ್ತಿದ್ದಾರೆ. ಸಮಂತಾ ಜೊತೆಗೆ ಡಿವೋರ್ಸ್ ಆದ ಮೇಲೆ ಶೋಭಿತಾ ಧೂಳಿಪಾಲ ಜೊತೆಗೆ ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ಶೀಘ್ರದಲ್ಲಿಯೇ ಮದುವೆಯ ದಿನಾಂಕವನ್ನು ಘೋಷಣೆ ಮಾಡಲಿದ್ದಾರೆ. ಆದರೆ ಈ ಘಟನೆ ಮನೆಯವರೆಲ್ಲರಿಗೂ ಬೇಸರ ತರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!