ಬೆಂಗಳೂರು : ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂಬ ಫೋಟೋ ಒಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಾ ಇದೆ. ಸಿನಿಮಾದ ಫೋಟೋ ಒಂದನ್ನು ಹಾಕಿ, ಪ್ರಜ್ವಲ್ ದೇವರಾಜ್ ಇನ್ನಿಲ್ಲ. ಓಂ ಶಾಂತಿ ಎಂದು ಕೋರಿದ್ದಾರೆ. ಈ ಪೋಸ್ಟರ್ ವೈರಲ್ ಆಗುತ್ತಿದ್ದಂತೆ ಅವರ ಆಪ್ತರು ಇದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ವೀರಂ ಫೋಟೋ ಹಾಕಿ ಪ್ರಜ್ವಲ್ ದೇವರಾಜ್ ಇನ್ನಿಲ್ಲ.. ಓಂ ಶಾಂತಿ ಎಂದು ಪೋಸ್ಟ್ ಹಾಕಿದ್ದಾರೆ. ಇದು ಸೋಷಿಯಲ್ ಮೀಡಿಯಾದಲ್ಲೆಲ್ಲಾ ವೈರಲ್ ಆಗಿದೆ. ಈ ಕೆಲಸ ಮಾಡಿದ ಕಿಡಿಗೇಡಿಗಳು ಯಾರು ಎಂಬುದು ತಿಳಿಯುತ್ತಿಲ್ಲ. ಇದು ಅವರ ಕುಟುಂಬದ ಗಮನಕ್ಕೂ ಬಂದಿದ್ದು, ಕುಟುಂಬಸ್ಥರು ಬೇಸರ ಮಾಡಿಕೊಂಡಿದ್ದಾರೆ.

ಇನ್ನು ಪ್ರಜ್ವಲ್ ದೇವರಾಜ್ ಅವರು ಆರೋಗ್ಯವಾಗಿರುವ ವಿಚಾರ ತಿಳಿಸಿದ್ದಾರೆ. ಪ್ರಜ್ಚಲ್ ದೇವರಾಜ್ ಕ್ಷೇಮವಾಗಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಪ್ರಜ್ವಲ್ ಅವರ ಫೋಟೋ ದುರ್ಬಳಕೆ ಮಾಡಲಾಗಿದೆ. ಆರೋಗ್ಯವಂತ ನಟನ ಬಗ್ಗೆ ಈ ರೀತಿಯ ಸುಳ್ಳು ಸುದ್ದಿ ಸಲ್ಲದು. ಇದರಿಂದ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಆತಂಕ ಉಂಟಾಗುತ್ತದೆ ಎಂದು ಪ್ರಜ್ವಲ್ ಅವರ ಆಪ್ತರು ತಿಳಿಸಿದ್ದಾರೆ.
ಇನ್ನು ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ದೂರು ನೀಡಲು ಕುಟುಂಬಸ್ಥರು ಮುಂದಾಗಿದ್ದಾರೆ. ಅಭಿಮಾನಿಗಳಿಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಅಂತಾನೂ ಮಾಹಿತಿ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಆಗಾಗ ಬೇಡದ ಸುದ್ದಿಗಳೇ ಜೋರಾಗಿ ಹಬ್ಬುತ್ತವೆ. ಅದರಲ್ಲೂ ಸೆಲೆಬ್ರೆಟಿಗಳ ವಿಚಾರದಲ್ಲಿ ಸಾವಿನ ಸುದ್ದಿಯೇ ಹೆಚ್ಚಾಗಿ ಹಬ್ಬುತ್ತದೆ. ದ್ವಾರಕೀಶ್ ಅವರ ವಿಚಾರವಾಗಿ ಅದೆಷ್ಟು ಬಾರಿ ಸಾವಿನ ಸುದ್ದಿ ಹಬ್ಬಿಸಿದರೋ. ಪ್ರತಿ ಸಲ ಅವರೇ ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಇದೀಗ ಪ್ರಜ್ವಲ್ ದೇವರಾಜ್ ವಿಚಾರದಲ್ಲೂ ಅದೇ ಆಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















