Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಟ ಪುನೀತ್ ರಾಜ್‍ಕುಮಾರ್ 2ನೇ ಪುಣ್ಯಸ್ಮರಣೆ : ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

---Advertisement---

 

ಬೆಂಗಳೂರು: ಇಂದು ಅಪ್ಪು ಎರಡನೇ ವರ್ಷದ ಪುಣ್ಯಸ್ಮರಣೆ. ಅವರು ಭೌತಿಕವಾಗಿ ನಮ್ಮ‌ ನಡುವೆ ಇಲ್ಲದಂತೆ ಆಗಿ ಎರಡು ವರ್ಷಗಳು ಕಳೆದಿವೆ. ಇದರ ನಡುವೆ ಕರ್ನಾಟಕ ರತ್ನವನ್ನು ನೆನೆಯದ ದಿನವಿಲ್ಲ. ವಿಧಿಯನ್ನು ಶಪಿಸದ ಸಮಯವಿಲ್ಲ. ಇಂದು ಕಂಠೀರವ ಸ್ಟುಡಿಯೋದಲ್ಲಿ ಪೂಜೆ ಸಲ್ಲಿಸಲಾಗಿದೆ.

ಅಪ್ಪು ಸಮಾಧಿ ಹೂವುಗಳಿಂದ ಅಲಂಕಾರಗೊಂಡಿದೆ. ಲೈಟುಗಳಿಂದ ಕಂಗೊಳಿಸುತ್ತಿದೆ. ಬೆಳಗ್ಗೆಯೇ ಮನೆಯವರೆಲ್ಲ ಸೇರಿ, ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಪ್ಪುಗೆ ಇಷ್ಟವಾದ ತಿನಿಸುಗಳನ್ನೆಲ್ಲಾ ಸಮಾಧಿ‌ವಮುಂದೆ‌ ಇಟ್ಟು ಪೂಜೆ ಸಲ್ಲಿಸಲಾಗಿದೆ. ಕುಟುಂಬಸ್ಥರೆಲ್ಲಾ ಸೇರಿ, ಪೂಜೆ ಮಾಡಿದ್ದಾರೆ.

ಇನ್ನೂ ಸಮಾಧಿ ಬಳಿ ಅಭಿಮಾನಿಗಳ ದಂಡು ಹರಿದು ಬಂದಿದೆ. ಜಿಲ್ಲೆಯ ನಾನಾ ಭಾಗಗಳಿಂದಾನೂ ಅಭಿಮಾನಿಗಳು ಬಂದಿದ್ದಾರೆ. ಅಪ್ಪುಗಾಗಿ ತಿನಿಸು, ಹೂಗಳನ್ನು ತಂದು, ಸಮಾಧಿ ಬಳಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟನಿಗೆ ನಮಸ್ಕರಿಸಿದ್ದಾರೆ.

ಅಂದು 2021 ಅಕ್ಟೋಬರ್ 29 ರಾಜ್ಯಾದ್ಯಂತ ಭಜರಂಗಿ2 ಸಿನಿಮಾ ತೆರೆಗೆ ಬಂದಿತ್ತು. ಅದಕ್ಕೂ ಮುನ್ನ ಭಜರಂಗಿ 2 ಸಿನಿಮಾ ಇವೆಂಟ್ ನಲ್ಲಿ ಅಣ್ಣನ ಜೊತೆ ಸೇರಿ, ಅಪ್ಪು ಕೂಡ ಕುಣಿದು ಕುಪ್ಪಳಿಸಿದ್ದರು. ಆದರೆ ಸಿನಿಮಾ ಶುರುವಾಗಿ ಒಂದು ಗಂಟೆಯಾಗಿತ್ತಷ್ಟೆ, ಅಪ್ಪು ಆಸ್ಪತ್ರೆ ಸೇರಿದ ವಿಚಾರ ಬಂದಿತ್ತು. ಮಧ್ಯಾಹ್ನದ ವೇಳೆಗೆ ಎಲ್ಲರನ್ನು ಅಗಲಿದ್ದರು. ಮೂರು ದಿನಗಳ ಕಾಲ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿತ್ತು. ಹಗಲು – ರಾತ್ರಿ ಅಭಿಮಾನಿಗಳ ಜನ ಸಾಗರವೇ ಅಂತಿಮ ದರ್ಶನಕ್ಕೆ ನೆಲೆಸಿತ್ತು. ಇಡೀ ಕರ್ನಾಟಕ ಕಣ್ಣೀರಾಗಿತ್ತು. ಇಂದು ಆ ಕರಾಳ ದಿನಕ್ಕೆ ಎರಡು ವರ್ಷ ಅಭಿಮಾನಿಗಳ ಕಣ್ಣೀರು ಈಗಲು ಬತ್ತಿಲ್ಲ. ಆದರೆ ಅವರ ನೆನಪಿನೊಂದಿಗೆ ಅಪ್ಪುರನ್ನು ಸೆಲೆಬ್ರೇಟ್ ಮಾಡುತ್ತಾ ಕಾಲ ದೂಡುತ್ತಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...