ನಟ ವಿನೋದ್ ರಾಜ್ ಭೇಟಿ, ಸಹಾಯ : ಸಂಧಾನ ಮಾಡಲು ಬಂದರಾ ನಟ..? ರೇಣುಕಾಸ್ವಾಮಿ ತಂದೆ ಸ್ಪಷ್ಟನೆ…!

1 Min Read

ಸುದ್ದಿಒನ್, ಚಿತ್ರದುರ್ಗ, ಜುಲೈ. 26 : ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪದ ಮೇಲೆ ದರ್ಶನ್ ಗ್ಯಾಂಗ್ ಕಡೆಯಿಂದ ಕೊಲೆಯಾಗಿದ್ದರು. ರೇಣುಕಾಸ್ವಾಮಿ ಹೆಂಡತಿ ಈಗ ಗರ್ಭಿಣಿ. ತಂದೆ-ತಾಯಿ ವಯಸ್ಸಾದವರು. ಮನೆಗೆ ಆಸರೆಯಾಗಿದ್ದ ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿದ್ದಾರೆ. ಈಗ ಹಿರಿಯ ನಟ ವಿನೋದ್ ರಾಜ್ ಅವರು ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ಬಂದು ಅವರ ಕುಟುಂಬದವರನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಒಂದು ಲಕ್ಷ ರೂಪಾಯಿ ಹಣದ ಸಹಾಯವನ್ನು ಮಾಡಿದ್ದಾರೆ. ಈ ಮಧ್ಯೆ ಸಂಧಾನ ಏನಾದರೂ ಮಾಡುವುದಕ್ಕೆ ಬಂದಿದ್ದರಾ ಎಂಬ ಪ್ರಶ್ನೆಗೆ ರೇಣುಕಾಸ್ವಾಮಿ ತಂದೆ ಸ್ಪಷ್ಟನೆ ನೀಡಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಾವು ಯಾರ ಹಾಗೂ ಯಾವ ಸಂದಾನಕ್ಕೆ ಮುಂದಾಗಿಲ್ಲ, ನನ್ನ ಮಗನ ಸಾವಿಗೆ ನ್ಯಾಯ ಸಿಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಕಣ್ಣೀರು ಹಾಕಿದ್ದಾರೆ.

ನಟ ವಿನೋದ್ ರಾಜ್ ಭೇಟಿ ನೀಡಿದ ವೇಳೆ, ರೇಣುಕಾ ಸ್ವಾಮಿ ತಂದೆ ಕಣ್ಣೀರು ಹಾಕಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಅವನು ಸಾಯುವ ಸಂದರ್ಭದಲ್ಲಿ ನರಳಿದ್ದ ರೀತಿ ಕೇಳಿದ್ರೆ ನಮ್ಮ ಕರುಳು ಕಿತ್ತು ಬರುತ್ತಿದೆ. ನಾವು ಬಹಳ ನೊಂದಿದ್ದೇವೆ ನನ್ನ ಮನೆತನ ನಾಶವಾಗಿದೆ. ನನ್ನ ಮಗ ಹೋದಾಗಿಂದ ನಾವೆಲ್ಲರೂ ತುಂಬಾ ನೋವಿನಲ್ಲಿದ್ದೇವೆ. ಸರ್ಕಾರಕ್ಕೆ ವಿನಂತಿ ಮಾಡುತ್ತೇವೆ ಸೊಸೆಗೆ ಸರ್ಕಾರಿ ಕೆಲಸ ಕೊಡಿ, ನನ್ನ ಮಗನಿಗೆ ನ್ಯಾಯಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶೀನಾಥ ಶಿವನಗೌಡ್ರ ಅಳಲು ತೋಡಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆಯಾದ‌ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದು, ಆತನ ಮೊಬೈಲ್ ನಲ್ಲಿದ್ದ ಅಕೌಂಟ್ ಬಗ್ಗೆ ಮಾಹಿತಿ ನೀಡಿದ್ದರು. ಆ ಫೇಕ್ ಅಕೌಂಟ್ ನಿಂದ ಆತ ಹಲವು ನಟಿಯರಿಗೆ ಅಶ್ಲೀಲ ಮೆಸೇಜ್ ಮಾಡಿದ್ದ ವಿಚಾರ ಹೊರಗೆ ಬಂದಾಗಲೂ, ಅವರ ತಂದೆ ತಾಯಿ ಕೋಪಗೊಂಡಿದ್ದರು. ಈ ವಿಚಾರ ಈಗ ಹೇಳೋದಲ್ಲ, ಮೊದಲೇ ಹೇಳಬೇಕಿತ್ತು ಎಂದು ಆಕ್ರೋಶ ಹೊರ ಹಾಕಿದ್ದರು. ಇದೀಗ ನಟ ವಿನೋದ್ ರಾಜ್ ಭೇಟಿ ಕುರಿತು ಮಾತನಾಡಿದ ಅವರು ಸಂಧಾನದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *