Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಶ್ವಿನಿ ಪುನೀತ್ ರಾಜ್‍ಕುಮಾರ್ ಅನುಮತಿಗಾಗಿ ಕಾಯ್ತಿದ್ದಾರೆ ನಟ ವಿಶಾಲ್..!

Facebook
Twitter
Telegram
WhatsApp

 

ಬೆಂಗಳೂರು: ಅಪ್ಪು ಅಗಲಿಕೆಯ ನೋವು ಬರೀ ಸ್ಯಾಂಡಲ್ ವುಡ್ ಮಾತ್ರ ಅಲ್ಲ ಬೇರೆ ಬೇರೆ ಇಂಡಸ್ಟ್ರಿಯವರನ್ನು ಕಾಡುತ್ತಿದೆ. ಕರ್ನಾಟಕ ರತ್ನ ತೆರೆ ಮರೆಯಲ್ಲಿ ಮಾಡ್ತಿದ್ದಂತ ಸಮಾಜ ಸೇವೆಯಲ್ಲಿ ಮಕ್ಕಳ ವಿಧ್ಯಾಭ್ಯಾಸವೂ ಒಂದು.‌ ಈಗ ಅವರಿಲ್ಲದೇ ಎಲ್ಲಾ ಜವಬ್ದಾರಿಯೂ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ಹೆಗಲ ಮೇಲೆ ಬಿದ್ದಿದೆ.

ತಮಿಳು ನಟ ವಿಶಾಲ್ ನಿನ್ನೆ ನಡೆದ ನುಡಿ ನಮನದಲ್ಲೂ ಭಾಗಿಯಾಗಿದ್ದರು. ಇಂದು ಕಂಠೀರವ ಸ್ಟುಡಿಯೋಗೆ ಹೋಗಿ ಅಪ್ಪು ಸಮಾಧಿ ಹಾಗೂ ಡಾ. ರಾಜ್‍ಕುಮಾರ್, ಪಾರ್ವತಮ್ಮ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿ, ನಮಸ್ಕರಿಸಿ ಬಂದಿದ್ದಾರೆ.

ಬಳಿಕ ಶಿವಣ್ಣನ ಮನೆಗೋಗಿ ಶಿವಣ್ಣನ ಬಳಿ ಮಾತಾಡಿ ಒಂದಷ್ಟು ಸಂತೈಸಿ ಬಂದಿದ್ದಾರೆ. ಪುನೀತ್ ರಾಜ್‍ಕುಮಾರ್ ಮನೆಗೆ ಬಂದು ಅವರ ಫೋಟೋಗೆ ನಮಸ್ಕರಿಸಿದ್ದಾರೆ. ಕಣ್ಣಲ್ಲಿದ್ದು ನೀರು ಆ ಕ್ಷಣ ಗೊತ್ತಿಲ್ಲದೆ ಹೊರಗೆ ಬಂದಿದೆ. ವಿಶಾಲ್ ಅವರಿಗೆ ದುಃಖ ಹೆಚ್ಚಾಗಿದೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಮಗಳಿಗೆ ಧೈರ್ಯ ತುಂಬಿ ಬಂದಿದ್ದಾರೆ.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಶಾಲ್, ವಿಶಾಲ ಹೃದಯ ತೆರೆದಿಟ್ಟಿದ್ದಾರೆ. ಪುನೀತ್ ರಾಜ್ಕುಮಾರ್ ನೋಡಿಕೊಳ್ಳುತ್ತಿದ್ದ 1800 ಮಕ್ಕಳ ವಿಧ್ಯಾಭ್ಯಾಸವನ್ನ ನಾನು ಮುಂದುವರೆಸಬೇಕೆಂದುಕೊಂಡಿದ್ದೇನೆ. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರ ಬಳಿ ಇದಕ್ಕೆ ಅನುಮತಿಯನ್ನು ಕೇಳಿದ್ದೇನೆ. ಅವರು ಸಮಯಾವಾಕಾಶ ತೆಗೆದುಕೊಂಡಿದ್ದಾರೆ. ಅವರು ಅನುಮತಿ ನೀಡಿದ್ರೆ ಅಪ್ಪು ನಡೆಸಿಕೊಂಡು ಹೋಗುತ್ತಿದ್ದಂತೆ ನಾನು ನಡೆಸಿಕೊಂಡು ಹೋಗ್ತೀನಿ ಅಂತ ವಿಶಾಲ್ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!