Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಟಿ ಶೋಭಿತಾ ಶಿವಣ್ಣ ಸಾವು : ಪ್ರೀತಿಸಿ‌ಮದುವೆಯಾಗಿದ್ದ ನಟಿಗೆ ಏನಾಯ್ತು..?

---Advertisement---

ಬ್ರಹ್ಮಗಂಟು ಸೀರಿಯಲ್ ಮೂಲಕ ಖ್ಯಾತಿ ಪಡೆದಿದ್ದ ನಟಿ ಶೋಭಿತಾ ಶಿವಣ್ಣ ಹೈದ್ರಾಬಾದ್ ನಲ್ಲಿ ಸಾವನ್ನಪ್ಪಿದ್ದಾರೆ. ಮದುವೆಯಾದ ಬಳಿಕ ಶೋಭಿತಾ ನಟನೆಯಿಂದ ದೂರಾಗಿ ಹೈದ್ರಾಬಾದ್ ನಲ್ಲಿಯೇ ವಾಸವಾಗಿದ್ದರು. ಮಧ್ಯರಾತ್ರಿಯೇ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದ್ದು, ಕುಟುಂಬಸ್ಥರು ಹೈದ್ರಾಬಾದ್ ಗೆ ತೆರಳಿದ್ದಾರೆ.

ನಟಿ ಶೋಭಿತಾ 2023ರ ಮೇ ತಿಂಗಳಲ್ಲಿ ಮದುವೆಯಾಗಿದ್ದರು. ಹುಡುಗ ಬಗ್ಗೆ ಎಲ್ಲಿಯೂ ಮಾಹಿತಿ ಇಲ್ಲ. ಆದರೆ ಮದುವೆಗೆ ಬ್ರಹ್ಮಗಂಟು ಧಾರಾವಾಹಿ ತಂಡದ ಕಲಾವಿದರು ಹೋಗಿದ್ದರು. ಹಾರೈಸಿ ಬಂದಿದ್ದರು. ಆಗ ಸೋಷಿಯಲ್ ಮೀಡಿಯಾದಲ್ಲಿ ಮದುವೆಯ ಫೋಟೋಗಳು ವೈರಲ್ ಆಗಿದ್ದವು. ಆದರೆ ನಟಿ ಇದ್ದಕ್ಕಿದ್ದ ಹಾಗೇ ಪ್ರಾಣ ಕಳೆದುಕೊಂಡಿರುವುದು ಸೀರಿಯಲ್ ನಲ್ಲಿ ಒಟ್ಟಿಗೆ ಅಭಿನಯಿಸಿದ ಕಲಾವಿದರಿಗೂ ಶಾಕ್ ಆಗಿದೆ. ಶೋಭಿತಾ ಲೈಫ್ ನಲ್ಲಿ ಏನಾಗಿತ್ತು..? ಹೇಗೆ ಸಾವನ್ನಪ್ಪಿದರು ಎಂಬ ವಿವರವೆಲ್ಲ ಇನ್ನಷ್ಟೇ ಹೊರಗೆ ಬರಬೇಕಿದೆ.

ಶೋಭಿತಾ ಬ್ರಹ್ಮಗಂಟು ಸೀರಿಯಲ್ ನಲ್ಲಿ ವಿಲನ್ ಪಾತ್ರ ಮಾಡಿ ಎಲ್ಲರ ಗಮನ ಸೆಳೆದಿದ್ದರು. ಆ ಮೂಲಕವೇ ಫೇಮಸ್ ಆಗಿದ್ದರು. ಬ್ರಹ್ಮಗಂಟು, ನಿನ್ನಿಂದಲೇ ಧಾರಾವಾಹಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿಯೂ ನಟಿಸಿದ್ದರು. ಆದರೆ ಈಗ ದುರಂತ್ಯ ಅಂತ್ಯ ಕಂಡಿದ್ದಾರೆ. ಈ ಸುದ್ದಿ ಕೇಳಿ, ಶೋಭಿತಾ ಮನೆಯವರು ಕೂಡ ನಿಜಕ್ಕೂ ಶಾಕ್ ಆಗಿದ್ದಾರೆ. ಈಗ ಹೈದ್ರಾಬಾದ್ ಗೆ ಹೋಗಿದ್ದು, ಮಗಳಿಗೆ ಏನಾಯ್ತು ಎಂಬುದನ್ನು ತಿಳಿಯಲಿದ್ದಾರೆ. ಆದರೆ ಕಿರುತೆರೆ ನಟಿಯರಿಗಂತು ಈ ಸುದ್ದಿ ಆಘಾತಕಾರಿಯಾಗಿದೆ. ಬ್ರಹ್ಮಗಂಟು ಧಾರಾವಾಹಿಯಲ್ಲಿ ಗುಂಡಮ್ಮನಿಗೆ ತಂಗಿಯಾಗಿ ಮಾಡಿದ್ದರು. ಕಿತಾಪತಿ ಮಾಡುವ ಸೊಸೆಯಾಗಿದ್ದರು. ವಿಲನ್ ಪಾತ್ರದಲ್ಲಿ ಗಮನ ಸೆಳೆದಿದ್ದರು. ಆದರೆ ಇದ್ದಕ್ಕಿದ್ದ ಹಾಗೇ ಜೀವನವನ್ನೇ ಕೊನೆ ಮಾಡಿಕೊಂಡಿರುವುದು ಮಾತ್ರ ದುರಂತವೇ ಸರಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment