Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಸ್ಪತ್ರೆಯಲ್ಲಿಯೇ ಉತ್ತರಾಧಿಕಾರಿ ನೇಮಿಸಿದ ಹುಬ್ಬಳ್ಳಿಯ ಮಂಟೂರು ಅಡವಿ ಸಿದ್ದೇಶ್ವರ ಸ್ವಾಮೀಜಿ..!

---Advertisement---

ಹುಬ್ಬಳ್ಳಿ: ಶಿವಲಿಂಗೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸಿತ್ತಾ ಬರುತ್ತಿದೆ. ಹೃದಯಾಘಾತವಾಗಿದ್ರು, ಕಳೆದ ಐದು ದಿನದಿಂದ ನಗರದ ತತ್ವದರ್ಶ ಆಸ್ಪತ್ರೆಯಲ್ಲಿ ಪಡೆಯುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳು ಬೇಗ ಗುಣಮುಖರಾಗಲೆಂದು ಭಕ್ತಗಣ ಪ್ರಾರ್ಥಿಸುತ್ತಿದ್ದಾರೆ.

ಸ್ವಾಮೀಜಿಯ ಇಂಥ ಪರಿಸ್ಥಿತಿಯಲ್ಲಿ ಹುಬ್ಬಳ್ಳಿ ತಾಲೂಕಿನ ಮಂಟೂರು ಶ್ರೀ ಅಡವಿ ಸಿದ್ದೇಶ್ಚರ ಹಾಗೂ ಸೊರಬ ತಾಲೂಕಿನ ಗೇರಕೊಪ್ಪ ಇಂಧುದರೇಶ್ವರ ಮಠದ ಪೀಠಾಧಿಪತಿ ಯಾರು ಎಂಬ ಪ್ರಶ್ನೆ ಕಾಡುವುದಕ್ಕೆ ಶುರು ಮಾಡಿತ್ತು. ಇದರ ಮಧ್ಯೆ ಆಸ್ಪತ್ರೆಯ ಆವರಣದಲ್ಲಿಯೇ ಭಕ್ತರ ಕೋರಿಕೆ ಮೇರೆಗೆ ಹಾಗೂ ಸ್ವಾಮೀಜಿಯವರ ಸಮ್ಮುಖದಲ್ಲಿ ಮಂತ್ರ ಪಠಣದೊಂದಿಗೆ ಸಾಂಕೇತಿಕವಾಗಿ ಅಡವಿಸಿದ್ದೇಶ್ವರ ಮಠದ ಉತ್ತರಾಧಿಕಾರಿಯಾಗಿ ಇಂಧುಧರ ಶ್ರೀಗಳನ್ನು ಉತ್ತರಾಧಿಕಾರಿಯಾಗಿ ನೇಮಕ ಮಾಡಲಾಗಿದೆ‌. ಎರಡು ಮಠಕ್ಕೆ ಪೂರ್ವ ನಿಯೋಜಿತ ಇಂಧುದರ ದೇವರನ್ನು ಬೊಮ್ಮನಹಳ್ಳಿ ಶಿವಯೋಗೀಶ್ವರ ಶ್ರೀ ಹಾಗೂ ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ ಸಮ್ಮುಖದಲ್ಲಿ ಘೋಷಣೆ ಮಾಡಲಾಗಿದೆ. ಭಕ್ತರು ಆತಂಕಗೊಳ್ಳದೆ ಇರಲಿ ಎಂಬ ಉದ್ದೇಶದಿಂದ ಶಿವಲಿಂಗೇಶ್ವರ ಸ್ವಾಮೀಜಿ ಅವರ ಇಚ್ಛೆಯಮನತೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.

ಉತ್ತರಾಧಿಕಾರಿಯಾದ ಬಳಿಕ ಮಾತನಾಡಿದ ಇಂದುಧರ ಸ್ವಾಮೀಜಿ, ನಮ್ಮ ಹಿರಿಯ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದೆ. ಅವರ ಶಿಷ್ಯ ಬಳಗದಲ್ಲಿ ನಾನು ಇದ್ದ ಕಾರಣ ನಮ್ಮ ಪೀಠಕ್ಕೆ ಆಸ್ಪತ್ರೆಯಲ್ಲಿಯೇ ಉತ್ತರಾಧಿಕಾರಿಯನ್ನು ನೇಮಕ ಮಾಡಿದರು‌ ಎಂದಿದ್ದಾರೆ.

ಇನ್ನು ಹುಬ್ಬಳ್ಳಿ ಸುತ್ತಮುತ್ತಲಿನ ಗ್ರಾಮದ ಭಕ್ತರು ಆಸ್ಪತ್ರೆಗೆ ಬಂದು ಸ್ವಾಮೀಜಿ ಅವರ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ. ಅಂಕಲಗಿ ಅಡವಿ ಸಿದ್ದೇಶ್ವರ ಮಠದ ಅಮರಸಿದ್ದೇಶ್ವರ ಸ್ವಾಮೀಜಿ ಹಾಗೂ ಮಂಟೂರು, ಬಮ್ಮುಗಟ್ಟಿ, ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಗೇರಗೊಪ್ಪದ ಭಕ್ತರು ಕೂಡ ಆಸ್ಪತ್ರೆಗೆ ಧಾವಿಸಿ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment