Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರವರ್ಗ 3ಕ್ಕೆ ಸೇರಿಸಿದ್ದು ಒಳ್ಳೆಯದಲ್ಲ : ಹಳ್ಳಿಕಾರ್ ಸಮುದಾಯಕ್ಕೆ ಸಿಎಂ ಗುಡ್ ನ್ಯೂಸ್

Facebook
Twitter
Telegram
WhatsApp

ಬೆಂಗಳೂರು: ಇಂದು ರಾಜ್ಯ ಹಳ್ಳಿಕಾರ್ ಸಂಘ ಆಯೋಜಿಸಿದ್ದ ಸಮಾವೇಶದಲ್ಲಿ ಭಾಗವಹಿಸಿದ್ದ ಸಿಎಂ ಸಿದ್ದರಾಮಯ್ಯ ಸಮಾವೇಶದಲ್ಲಿಯೇ ಸಮುದಾಯಕ್ಕೆ ಗುಡ್ ನ್ಯೂಸ್ ನೀಡಿದ್ದಾರೆ. ಈಗಾಗಲೇ ಪ್ರವರ್ಗ 3ಕ್ಕೆ ಸೇರಿಸಲಾಗಿದೆ. ಆದರೆ ಅದು ಸರಿ ಅಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ.

 

ನನಗೆ ಹಳ್ಳಿಕಾರ್ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಖಂಡಿತಾ ಸಹಾಯ ಮಾಡುತ್ತೇನೆ. ಹಳ್ಳಿಕಾರ್ ಸಮುದಾಯವನ್ನು ಪ್ರವರ್ಗ 3ಕ್ಕೆ ಸೇರಿಸಿದ್ದು ಸರಿಯಲ್ಲ. ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆ ಮೊದಲಿನಿಂದಾನೂ ಇದೆ. ಈ ಸಂಬಂಧ ವರದಿ ತರಿಸಿಕೊಂಡು, ಅದನ್ನು ಸಂಪುರ್ಣವಾಗಿ ನೋಡಿದ ಬಳಿಕ ತೀರ್ಮಾನಿಸುತ್ತೇನೆ. ಹಳ್ಳಿಕಾರ್ ಸಮುದಾಯದ ಬಗ್ಗೆ‌ ಸೂಕ್ತ ತೀರ್ಮಾನವನ್ನೇ ತೆಗೆದುಕೊಳ್ಳುತ್ತೇನೆ. ಸಮಾಜದಲ್ಲಿರುವ ಹಲವು ಜಾತಿಗಳ ಆರ್ಥಿಕ, ಸಾಮಾಜಿಕ ಸ್ಥಿತಿಗತಿ ತಿಳಿಯಲು, ಜಾತಿ ಸಮೀಕ್ಷಾ ವರದಿಗಳು ಮುಖ್ಯ. ಆದರೆ ರಾಜ್ಯದಲ್ಲಿ 2011ರ ಜಾತಿಗಣತಿಯೇ ಕೊನೆಯ ಜಾತಿಗಣತಿಯಾಗಿದೆ.

ಈಗ ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇಕಡ 10ರಷ್ಟು ಮೀಸಲಾತಿ‌ ನೀಡಿದೆ. ಈ ವ್ಯಾಪ್ತಿಯೊಳಗೆ ಹಳ್ಳಿಕಾರ್ ಸಮುದಾಯ ಬರುತ್ತದೆಯಾ ಎಂಬುದನ್ನು ಪರಿಶೀಲಿಸಬೇಕು. ಈ ಸಮುದಾಯವನ್ನು ಪ್ರವರ್ಗ 3A ಗೆ ಸೇರಿಸುವುದು ಸೂಕ್ತವಲ್ಲ. ಹೀಗಾಗಿ ಶಾಶ್ವತ ಹಿಂದುಳಿದ‌ ಸಮುದಾಯಕ್ಕೆ ನಿಮ್ಮ ಬೇಡಿಕೆ ಕಳುಹಿಸಿ. ಅಧ್ಯಯನ ಮಾಡಿ ನಂತರ ವರದಿ ಪಡೆಯಲಾಗುವುದು. ನಂತರದ ದಿನಗಳಲ್ಲಿ ಸಮುದಾಯಕ್ಕೆ ಏನು ಸಿಗಬೇಕು ಎಂಬುದನ್ನು ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಸಿದ್ದರಾಮಯ್ಯ ಅವರ ಮಾತು ಕೇಳಿದ ಹಳ್ಳಿಕಾರ್ ಸಮುದಾಯಕ್ಕೆ ಖುಷಿ‌ ಸಿಕ್ಕಂತೆ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಾಹಿತ್ಯವನ್ನು ಓದುವುದು, ಹಾಡುವುದು ಉತ್ತಮ ಹವ್ಯಾಸ : ಬಿ.ಎ.ಸೀತಾರಾಂ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಹಾಡುಗಾರಿಕೆಯಂತಹ ಉತ್ತಮ ಹವ್ಯಾಸಗಳನ್ನು ಯುವಕರು ಬೆಳೆಸಿಕೊಳ್ಳಬೇಕು ಎಂದು ದಾವಣಗೆರೆ ಜಿಲ್ಲಾಸ್ಪತ್ರೆಯ ನಿವೃತ್ತ ನೇತ್ರತಜ್ಞ ಬಿ.ಎ.ಸೀತಾರಾಂ ಹೇಳಿದ್ದಾರೆ. ಅವರು ಭಾನುವಾರ ನಗರದ ಸ್ಕೌಟ್ ಮತ್ತು ಗೈಡ್ ಭವನದಲ್ಲಿ ಏರ್ಪಡಿಸಿದ್ದ

ಚನ್ನಪಟ್ಟಣ ಗೆಲುವಿನ ಶುಭ ಸೂಚನೆ ನೀಡಿದಳಾ ಹಾಸನಾಂಬೆ ತಾಯಿ : ಕುಮಾರಸ್ವಾಮಿ ದೇವರ ಮುಂದೆ ನಿಂತಾಗ ಆಗಿದ್ದೇನು..?

ಹಾಸನ: ಈಗಾಗಲೇ ಹಾಸನಾಂಬೆಯ ದರ್ಶನ ಆರಂಭವಾಗಿದೆ. ಹತ್ತು ದಿನಗಳು ಮಾತ್ರ ತಾಯಿ ದರ್ಶನ ಭಾಗ್ಯಾ ಕೊಡುತ್ತಾಳೆ. ಈ ಹತ್ತು ದಿನಗಳ ಕಾಲ ರಾಜಕಾರಣಿಗಳು, ಸಾರ್ವಜನಿಕರು ಎಲ್ಲರೂ ದರ್ಶನ ಪಡೆಯಲು ಕ್ಯೂ ನಿಂತಿರುತ್ತಾರೆ. ಇಂದು ಕೇಂದ್ರ

ಊಟದ ವಿಚಾರಕ್ಕೆ ತಂದೆಯನ್ನೇ ಕೊಂದ ಮಗ..!

ಹಿರಿಯೂರು : ಕ್ಷುಲ್ಲಕ ಕಾರಣಕ್ಕೆ ನಡುವೆ ಜಗಳವಾಗಿದ್ದು, ಈ ಜಗಳದಿಂದ ತಂದೆಯ ಕೊಲೆಯಾಗಿರುವ ಘಟನೆ ಕುಂದಲಗುರ ಗ್ರಾಮದಲ್ಲಿ ನಡೆದಿದೆ. 50 ವರ್ಷದ ರಂಗಸ್ವಾಮಿ ಮೃತ ದುರ್ದೈವಿಯಾಗಿದ್ದಾರೆ. ಕೇವಲ ಊಟದ ವಿಚಾರಕ್ಕೆ ತಂದೆ ಮಗನ ನಡುವೆ

error: Content is protected !!