Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ : ಮಾರ್ಚ್ 25 ಕಡೆಯ ದಿನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಚಿತ್ರದುರ್ಗ. ಮಾ.24: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಮಾರ್ಚ್ 25 ಕಡೆಯ ದಿನವಾಗಿದೆ. ಚುನಾವಣೆ ಆಯೋಗಕ್ಕೆ ಕಳುಹಿಸಿದ ಜಿಲ್ಲೆಯ 1661 ಮತಗಟ್ಟೆಗಳ ಪಟ್ಟಿಗೆ ಅನುಮೋದನೆ ದೊರೆತಿದೆ ಎಂದು ಜಿಲ್ಲಾಧಿಕಾರಿ ಟಿ ವೆಂಕಟೇಶ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಜರುಗಿದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು.

ನಮೂನೆ 6ರಲ್ಲಿ ಮತಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಬಹದು. ಆನ್ಲೈನ್ ಮೂಲಕ ಸಲ್ಲಿಸಿದ ಅರ್ಜಿಗಳನ್ನು ಸಹ ಪರಿಗಣಿಸಲಾಗುವುದು. ನಮೂನೆ 8 ಸಲ್ಲಿಸುವ ತಿದ್ದುಪಡಿ ಅವಧಿ ಮುಕ್ತಾಯವಾಗಿದೆ. ಈಗಾಗಲೇ ಮತಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು. ಮೃತಪಟ್ಟ ಹಾಗೂ ಸ್ಥಳಾಂತರಗೊಂಡ ಹೆಸರುಗಳನ್ನು ಮತ ಪಟ್ಟಿಯಿಂದ ತೆಗೆದುಹಾಕಲಾಗಿದೆ.

ಜಿಲ್ಲೆಯಲ್ಲಿ 85 ವರ್ಷ ಮೇಲ್ಪಟ್ಟ 17,723 ಮತದಾರರಿದ್ದಾರೆ. ಚುನಾವಣೆ ಆಯೋಗ ಇವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಿದೆ. ಬಿ.ಎಲ್.ಒ(ಮತಗಟ್ಟೆ ಅಧಿಕಾರಿ)ಗಳು ಮನೆ ಮನೆಗೆ ತೆರಳಿ 85 ವರ್ಷ ಮೇಲ್ಪಟ್ಟವರಿಗೆ ಫಾರಂ12 ಡಿ, ನೀಡಿ ಸ್ವೀಕೃತಿ ಪಡೆಯುತ್ತಿದ್ದಾರೆ. ಮತಗಟ್ಟೆಗೆ ಆಗಮಿಸಲು ಸಾಧ್ಯವಿಲ್ಲದ ಹಾಸಿಗೆ ಹಿಡಿದ ವೃದ್ಧರು ಮನೆಯಿಂದಲೇ ಮತ ಚಲಾಯಿಸಲು ಆಯ್ಕೆ ಮಾಡಿಕೊಳ್ಳಬಹುದು.ಇದೇ ಮಾದರಿಯಲ್ಲಿ ಶೇ‌.40 ಕ್ಕಿಂತಲೂ ಹೆಚ್ಚಿನ ಅಂಗವೈಕಲ್ಯ ಇರುವ ವಿಕಲಚೇತನರಿಗೂ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗಿದೆ.ಜಿಲ್ಲೆಯಲ್ಲಿ 31926 ವಿಕಲಚೇತನ ಮತದಾದರು ಇದ್ದು, ಇವರಿಗೆ ಫಾರಂ 12 ಡಿ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ.

ಮನೆಯಿಂದ ಮತ ಚಲಾಯಿಸಲು ಆಯ್ಕೆ ಮಾಡಿಕೊಂಡವರ ವಿವರಗಳನ್ನು ಆಯಾ ಕ್ಷೇತ್ರವಾರು ಸಹಾಯಕ ಚುನಾವಣಾ ಅಧಿಕಾರಿಗಳು ಪ್ರತ್ಯೇಕ ಪಟ್ಟಿಸಿದ್ದಪಡಿಸುವರು. ಮತದಾರರ ಭೌಗೋಳಿಕ ಸಾಮ್ಯತೆ ಆಧರಿಸಿ ಮತದಾನಕ್ಕೆ ಅನುಕೂಲವಾಗುವಂತೆ ಮಾರ್ಗಗಳನ್ನು ರಚಿಸಲಾಗುವುದು. ಮತಗಟ್ಟೆ ಅಧಿಕಾರಿಗಳು ಮನೆ ಬಾಗಿಲಿಗೆ ತೆರಳಿ ಅಂಚೆ ಮತ ಪತ್ರದ ಮೂಲಕ ಮತದಾನ ಮಾಡಲು ಅವಕಾಶ ನೀಡುವರು. ಮನೆಯಿಂದ ಮತದಾನ ಮಾಡುವ ಮೊದಲ ದಿನದಂದು ಯಾರಾದರು ಮತದಾನದಿಂದ ಪ್ರಕ್ರಿಯೆಯಿಂದ ತಪ್ಪಿಹೊದರೇ, ಎರೆಡನೇ ಬಾರಿ ಮನೆ ಬಾಗಿಲಿಗೆ ತೆರಳಿ ಮತದಾನಕ್ಕೆ ಅವಕಾಶ ನೀಡಲಾಗುವುದು. ಈ ಎಲ್ಲಾ ವಿವರಗಳನ್ನು ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳಿಗೆ ಆಯಾ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ನೀಡುವರು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

ಜಿಲ್ಲೆಯಲ್ಲಿ 3861 ಅಗತ್ಯ ಸೇವಾ ಮತದಾರರು ಇದ್ದು, ಇವರಿಗೂ ಫಾರಂ 12 ಡಿ ನೀಡಲಾಗಿದೆ. ಇವರಿಗೆ ಮತದಾನದ ಪೂರ್ವದಲ್ಲಿ 3 ದಿನಗಳ ಕಾಲ ಪೆಸಿಲಿಟಿ ಸೆಂಟರ್ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಈಗಾಗಲೇ 30 ಸಾವಿರಕ್ಕೂ ಅಧಿಕ ಮತದಾದರ ಗುರುತಿನ ಚೀಟಿಗಳನ್ನು ಅಂಚೆ ಮೂಲಕ ರವಾನೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರತಿನಿಧಿಗಳಾದ ಡಿ.ಎನ್.ಮೈಲಾರಪ್ಪ, ಸಿ.ಜಿ.ನಾಸಿರುದ್ದೀನ್, ಬಿಜೆಪಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬಿ.ಯಶವಂತ್ ಕುಮಾರ್, ಜೆಡಿಎಸ್ ಪಕ್ಷದ ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ, ಡಿ.ಗೋಪಾಲಸ್ವಾಮಿ ನಾಯಕ್, ಬಿ.ಎಸ್.ಪಿ ಪಕ್ಷದ ಲಕ್ಷ್ಮಮ್ಮ, ಸಿಪಿಎಂ ಪಕ್ಷದ ಸುರೇಶ್ ಬಾಬು ಸೇರಿದಂತೆ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment