Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಸರ್ಕಾರಿ ನೌಕರರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

---Advertisement---

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ(ಫೆ.20) : ಮಕ್ಕಳ ಗಮನವನ್ನು ಅಂಕ ಗಳಿಕೆ ಮಾಡಿಕೊಳ್ಳುವತ್ತ ಮಾತ್ರ ಕೇಂದ್ರೀಕರಿಸದೆ, ಕ್ರೀಡಾ ಚಟುವಟಿಕೆಗಳಿಗೂ ಹೆಚ್ಚಿನ ಪ್ರೋತ್ಸಾಹ ಉತ್ತೇಜನ ನೀಡಬೇಕು ಎಂದು ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾ ಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳನ್ನು ಉದ್ಘಾಟಸಿ ಮಾತನಾಡಿದರು.

ವರ್ಷವಿಡೀ ಆರೋಗ್ಯದ ಕಾಳಜಿ ಸಹ ಮಾಡದೇ ಸರ್ಕಾರಿ ಕೆಲಸಗಳಲ್ಲಿ ನೌಕರರು ತೊಡಗಿಕೊಳ್ಳುತ್ತಾರೆ.  ಹಿಂದೆ ಕ್ರೀಡೆಯಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರಿಗೆ ಉತ್ತಮ ಪ್ರಾತಿನಿಧ್ಯ ನೀಡಲಾಗುತ್ತಿತ್ತು. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಪಾಲ್ಗೊಂಡು ಸಾಧನೆ ಮಾಡಲು ಸೂಕ್ತ ಪ್ರೋತ್ಸಾಹ ನೀಡಬೇಕು. ಮಕ್ಕಳು ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಲು ಮಹತ್ವ ನೀಡಿ, ಕ್ರೀಡಾ ಚಟುವಟಿಕೆಗಳಿಗೆ ದೂರ ಇಡುತ್ತೇವೆ. ಮಕ್ಕಳ ಕ್ರೀಡಾ ಚಟುವಟಿಕೆಗಳಿಗೆ ಪೋಷಕರು ಪ್ರೋತ್ಸಾಹ ನೀಡಬೇಕು. ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಷಿಯನ್ , ಕಾಮನ್ ವೆಲ್ತ್ ಒಲಂಪಿಕ್ ಕ್ರೀಡಾ ಕೂಟಗಳಲ್ಲಿ ಭಾಗವಹಿಸುವ ಕ್ರೀಡಾ ಪಟುಗಳಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದರು.

ಮನಸ್ಸು ಉಲ್ಲಾಸವಾಗಿರಬೇಕು ಎಂದರೆ ದಿನನಿತ್ಯ ಕ್ರೀಡಾ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು. ನಗರದಲ್ಲಿ ಸಿ.ಎ. ಸೈಟ್ ಪಡೆದು ಸುಸಜ್ಜಿತ ಕಟ್ಟಡ ಕಟ್ಟಿ ನೌಕರರ ಮನೋಲ್ಲಾಸ ಹಾಗೂ ಮನೋರಂಜನೆ ಅವಕಾಶ ನೀಡಬೇಕು. ಸರ್ಕಾರಿ ನೌಕರರ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಯಾವುದೇ ಪಕ್ಷಗಳು ಅಧಿಕಾರ ಹಿಡಿದು ತಮ್ಮ ಪ್ರಣಾಳಿಕೆಯನ್ನು ಜಾರಿಗೆ ತಂದು ಜನರಿಗೆ ಮುಟ್ಟಿಸುವಲ್ಲಿ ನೌಕರರ ಪಾತ್ರ ಹೆಚ್ಚಿನದು. ಜಿ.ಎಸ್.ಟಿ ಸಂಗ್ರಹದಲ್ಲಿ ನಮ್ಮ ರಾಜ್ಯ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ. ರಾಜ್ಯ ಅಭಿವೃದ್ಧಿ ಹೊಂದುವುದಕ್ಕೆ ಎಲ್ಲಾ ಕಾರಣ ಸರ್ಕಾರಿ ನೌಕರರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೌಕರರ ಪರವಾಗಿ ಹಾಗೂ ಒಳಿತಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ.

ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ಈಗಾಗಲೆ ವೇತನ ಆಯೋಗ ರಚನೆಯನ್ನೂ ಕೂಡ ಮಾಡಿದ್ದಾರೆ.  ಈ ಬಾರಿಯ ಬಜಟ್ ಮಂಡನೆ ನಂತರ ಸರ್ಕಾರಿ ನೌಕರರಲ್ಲಿ ಅಸಮಾಧಾನ ಮಡುಗಟ್ಟಿದೆ. ವೇತನ ಆಯೋಗ ಜಾರಿ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಒಲವು ತೋರಿದ್ದಾರೆ. ಐದಾರು ಶಾಸಕರು ಸೇರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವೇತನ ಆಯೋಗ ಜಾರಿ ಕುರಿತು ಪ್ರತ್ಯೇಕವಾಗಿ ಸಮಾಲೋಚನೆ ನಡೆಸುವುದಾಗಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ  ಆಶ್ವಾಸನೆ ನೀಡಿದರು.
ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಮಾತನಾಡಿ, ಪ್ರತಿ ವರ್ಷ ನೌಕರರಿಗೆ ಕ್ರೀಡಾಕೂಟ ಆಯೋಜನೆ ಮಾಡಲಾಗುತ್ತದೆ. ಕಾಲೇಜಿನ ಓದುವ ಸಂದರ್ಭದಲ್ಲಿ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತೇವೆ. ಆದರೆ ಸರ್ಕಾರಿ ನೌಕರಿ ಸೇರಿದ ಮೇಲೆ ಇದರಿಂದ ದೂರವಾಗುತ್ತೇವೆ. ನೌಕರರು ಚೈತನ್ಯದಾಯಕವಾಗಿ ಬೆಳಿಗ್ಗಿನ ಕೆಲಸ ಆರಂಭಿಸಬೇಕು. ಇದರಿಂದ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುತ್ತದೆ. ಶೇ.1 ರಷ್ಟು ಇರುವ ಸರ್ಕಾರಿ ನೌಕರರು ಶೇ.99 ರಷ್ಟು ಜನರ ಸಮಸ್ಯೆಗಳನ್ನು ಪರಿಹರಿಸಬೇಕು. ಎಲ್ಲಾ ಹಂತದ ಸರ್ಕಾರಿ ಕೆಲಸ ದೊಡ್ಡದು. ಇದರಲ್ಲಿ ಮೇಲು ಹಾಗೂ ಕೀಳು ಎಂಬುದಿಲ್ಲ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಮಾತನಾಡಿ, ಸರ್ಕಾರಿ ನೌಕರರು ಸದಾ ಕಾಲ ದುಡಿಯುತ್ತಾ ಜೀವನದ ಆನಂದ ಸವಿಯದೇ ಬದುಕುತ್ತಾರೆ. ಹೀಗೆ ಮಾಡದೇ ಪ್ರತಿನಿತ್ಯದ ಚಟುವಟಿಕೆಗಳನ್ನು ಆನಂದದಿಂದ ಅನುಭವಿಸಬೇಕು. ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ನಗರ ಸಭೆ ಉಪಾಧ್ಯಕ್ಷೆ ಶ್ರೀದೇವಿ ಚಕ್ರವರ್ತಿ,  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಆರ್ ಕೆ.ಆರ್.ಜಯಲಕ್ಷ್ಮಿಬಾಯಿ, ಚಿತ್ರದುರ್ಗ ಜಿಲ್ಲಾ ಸರ್ಕಾರಿ ನೌಕರರ ಸಂಘಧ ವಿಶೇಷಾಧಿಕಾರಿ ಆರ್.ಮೋಹನ್ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ಟಿ ತಿಮ್ಮಾರೆಡ್ಡಿ, ಜಿಲ್ಲಾ ಖಜಾಂಚಿ ಬಿ.ವೀರೇಶ್, ಹೊಳಲ್ಕೆರೆ ತಾಲ್ಲೂಕು ಅಧ್ಯಕ್ಷ ಲೋಕೇಶ್, ಹೊಸದುರ್ಗ ತಾಲ್ಲೂಕು ಅಧ್ಯಕ್ಷ ಆರ್. ಲಕ್ಷ್ಮಯ್ಯ, ಮೊಳಕಾಲ್ಮೂರು ತಾಲ್ಲೂಕು ಅಧ್ಯಕ್ಷ ಎಸ್.ಈರಣ್ಣ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಆರ್.ಶಿವಕುಮಾರ್, ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಪಿ.ಎಲ್. ಲಿಂಗೇಗೌಡ  ಜಿಲ್ಲಾ ಶಾಖೆಯ ಎಲ್ಲಾ ನಿರ್ದೇಶಕರುಗಳು, ತಾಲ್ಲೂಕು ಶಾಖೆಗಳ ಎಲ್ಲಾ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು, ಜಿಲ್ಲೆಯ ಎಲ್ಲಾ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಇದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...