Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

14 ವರ್ಷಗಳ ಬಳಿಕ ಬೆಂಕಿಪೊಟ್ಟಣದ ಬೆಲೆ ಏರಿಕೆ.. ಕಡ್ಡಿಯೂ ಹೆಚ್ಚಳ..!

Facebook
Twitter
Telegram
WhatsApp

ಚೆನ್ನೈ: ಬೆಂಕಿಪೊಟ್ಟಣ ಖರೀದಿ ಮಾಡದವರು ಯಾರಾದ್ರೂ ಇದ್ದಾರಾ..? ನೋ ವೆ ಚಾನ್ಸೆ ಇಲ್ಲ. ಪ್ರತಿಯೊಬ್ಬರ ಮನೆ ದೇವರ ಕೋಣೆಯಲ್ಲಿ ಇರುತ್ತೆ. ಕೆಲವು ಪುರುಷರ ಜೇಬಲ್ಲಿ ಸದಾ ಇರುತ್ತೆ. ದಿನನಿತ್ಯದ ಅಗತ್ಯ ವಸ್ತುಗಳಲ್ಲಿ ಬೆಂಕಿಪೊಟ್ಟಣ ಸಹ ಒಂದು. ಹೀಗಿದ್ರು ಸಹ ಬೆಂಕಿಪೊಟ್ಟಣ ತನ್ನ ಬೆಲೆಯನ್ನ ಹೆಚ್ಚಳ ಮಾಡಿಕೊಂಡಿರಲಿಲ್ಲ. ಸುಮಾರು 14 ವರ್ಷಗಳ ಬಳಿಕ 1 ರೂಪಾಯಿ ಏರಿಕೆ ಮಾಡಿದೆ.

ಡಿಸೆಂಬರ್ 1 ರಿಂದ ಬೆಂಕಿಪೊಟ್ಟಣದ ಬೆಲೆ 2 ರೂಪಾಯಿ ಆಗಲಿದೆ. ಸದ್ಯಕ್ಕೆ ಬೆಂಕಿಪೊಟ್ಟಣದ ಬೆಲೆ 1 ರೂಪಾಯಿ ಇದೆ. ಅಷ್ಟೆ ಅಲ್ಲ ಬೆಲೆ ಹೆಚ್ಚಳವಾದಂತೆ ಅದರಲ್ಲಿರುವ ಕಡ್ಡಿಯೂ ಹೆಚ್ಚಳವಾಗಲಿದೆ.

ಈ ಬಗ್ಗೆ ಸ್ಪಷ್ಟಪಡಿಸಿರುವ ಕಂಪನಿ, ಬೆಂಕಿಪೊಟ್ಟಣಕ್ಕೆ ಖರ್ಚಾಗುವ ಸಾಮಾಗ್ರಿಗಳ ಬೆಲೆ ಏರಿಕೆಯನ್ನು ತಿಳಿಸಿದೆ. ಸದ್ಯಕ್ಕೆ 1 ರೂಪಾಯಿ ಪಟ್ಟಣದಲ್ಲಿ 36 ಕಡ್ಡಿಗಳಿವೆ. 2 ರೂಪಾಯಿ ಪೊಟ್ಟಣದಲ್ಲಿ 50 ಕಡ್ಡಿಗಳಿರುತ್ತವೆ ಎಂಬುದನ್ನ ತಿಳಿಸಿದೆ. ಈ ಮೂಲಕ ಬೆಲೆ ಏರಿಕೆ ಜೊತೆಗೆ ಹೆಚ್ವಿನ ಕಡ್ಡಿಗಳು ನಮಗೆ ದೊರೆಯಲಿದೆ.

ಬೆಂಕಿಕಡ್ಡಿಗಳನ್ನು ತಯಾರಿಸಲು 14 ಬಗೆಯ ಕಚ್ಚಾ ಸಾಮಗ್ರಿಗಳು ಬೇಕಾಗುತ್ತವೆ. ಒಂದು ಕೆಜಿ ಕೆಂಪು ರಂಜಕ ರೂ. 425 ರಿಂದ ರೂ. 810 ಕ್ಕೆ, ಮೇಣ ರೂ. 58 ರಿಂದ ರೂ. 80 ಕ್ಕೆ, ಹೊರ ಬಾಕ್ಸ್ ಬೋರ್ಡ್ ರೂ. 36 ರಿಂದ ರೂ. 55 ಕ್ಕೆ ಮತ್ತು ಒಳ ಪೆಟ್ಟಿಗೆ ಬೋರ್ಡ್ ರೂ. 32 ರಿಂದ ರೂ. 58 ಕ್ಕೆ ಏರಿಕೆಯಾಗಿದೆ. ಅಕ್ಟೋಬರ್ 10 ರಿಂದ ಪೇಪರ್, ಸ್ಪ್ಲಿಂಟ್ಸ್, ಪೊಟ್ಯಾಸಿಯಮ್ ಕ್ಲೋರೇಟ್ ಮತ್ತು ಸಲ್ಫರ್ ಬೆಲೆಯೂ ಹೆಚ್ಚಾಗಿದೆ. ಹೀಗಾಗಿ ಬೆಂಕಿಪೊಟ್ಟಣದ ಬೆಲೆ ಏರಿಕೆಗೆ ಕಂಪನಿ ನಿರ್ಧರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೆಇಇ” ಮೈನ್ಸ್‌ ಫಲಿತಾಂಶ | ಆಲ್‌ ಇಂಡಿಯಾ ರ್ಯಾಂಕ್‌ ಪಡೆದು ದಾಖಲೆ ನಿರ್ಮಿಸಿದ ಚಿತ್ರದುರ್ಗದ ʼಎಸ್‌ ಆರ್‌ ಎಸ್‌ʼ ವಿದ್ಯಾರ್ಥಿಗಳು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.25 :  ನಗರದ ಎಸ್‌ ಆರ್‌ ಎಸ್‌ ಪಿಯು ಕಾಲೇಜಿನ ವಿದ್ಯಾರ್ಥಿಗಳು ಇದೇ ಏಪ್ರಿಲ್‌ ತಿಂಗಳಲ್ಲಿ ನಡೆದ “ಜೆಇಇ ಮೈನ್ಸ್‌”ನ (ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಎರಡನೇ ಸ್ಲಾಟ್‌ ಪರೀಕ್ಷೆಯಲ್ಲಿ ಕಾಲೇಜಿನ ವಿದ್ಯಾರ್ಥಿ

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

error: Content is protected !!