Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಷ್ಟಕ್ಕೂ 31 ವರ್ಷದ ಹಿಂದೆ ಹುಬ್ಬಳ್ಳಿಯಲ್ಲಿ ನಡೆದದ್ದು ಏನು..?

---Advertisement---

 

ಹುಬ್ಬಳ್ಳಿ: ರಾಮಮಂದಿರದ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ 31 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆ ನಡೆದಿತ್ತು. ಈ ಗಲಾಟೆ ಸಂಬಂಧ ಈಗ ಶ್ರೀಕಾಂತ್ ಪೂಜಾರಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಆರ್ ಎಸ್ ಎಸ್ ನಾಯಕರು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅಂದು ಹುಬ್ಬಳ್ಳಿಯಲ್ಲಿ ಅಂದು ಆಗಿದ್ದಾದರೂ ಏನು ಗೊತ್ತಾ..?

ಹುಬ್ಬಳ್ಳಿಯಲ್ಲಿ ಅಂದು 1992 ಡಿಸೆಂಬರ್ 5 ರಂದು ನಗರದಲ್ಲಿ ವಾತಾವರಣ ಭುಗಿಲೆದ್ದಿತ್ತು. ಡಿಸೆಂಬರ್ 6 ರಂದು ಕರಸೇವೆಗೂ ಮುನ್ನ ನಗರದಲ್ಲಿ ಗಲಭೆ ಎದ್ದಿತ್ತು. ಇಡೀ ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಯುತ್ತಿತ್ತು. ವಿಐಪಿ, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಈ ಹೋರಾಟವನ್ನು ಕೈಗೆತ್ತಿಕೊಂಡಿತ್ತು. ಸಾರ್ವಜನಿಕರ ಆಸ್ತಿ – ಪಾಸ್ತಿಗೆ ನಷ್ಟ ಮಾಡುವಂತ ಘಟನೆಗಳು ನಡೆದಿವೆ. ಘಟನೆ ಸಂಬಂಧ ಅಂದು 9 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಇಲ್ಲಿಯವರೆಗೂ ಪೆಂಡಿಂಗ್ ಉಳಿದಿತ್ತು.

ಆರೋಪಿಗಳಾದ ರಾಜು, ಅಶೋಕ್ ಕಲಬುರಗಿ, ಗುರುನಾಥ ಕಾಟಗಾರ್, ರಾಮಚಂದ್ರ ಕಲಬುರಗಿ, ಮೃತ ಕಲಬುರಗಿ ಸೇರಿದಂತೆ ಹಲವರ ಹುಡುಕಾಟಕ್ಕೆ ಪೊಲೀಸರು ಶುರು ಮಾಡುತ್ತಾರೆ. ಇದೀಗ ಆ ಕೇಸಿಗೆ ಸಂಬಂಧಪಟ್ಟಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ರಾಮ ಮಂದಿರ ಉದ್ಘಾಟನೆಯ ಹೊತ್ತಲ್ಲಿಯೇ ಈ ರೀತಿ ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. ಹೋರಾಟದ ಎಚ್ಚರಿಕೆನ್ನು ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment