ಹುಬ್ಬಳ್ಳಿ: ರಾಮಮಂದಿರದ ನಿರ್ಮಾಣದ ವಿಚಾರಕ್ಕೆ ಸಂಬಂಧಿಸಿದಂತೆ 31 ವರ್ಷಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆ ನಡೆದಿತ್ತು. ಈ ಗಲಾಟೆ ಸಂಬಂಧ ಈಗ ಶ್ರೀಕಾಂತ್ ಪೂಜಾರಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಸಂಬಂಧ ಆರ್ ಎಸ್ ಎಸ್ ನಾಯಕರು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಅಷ್ಟಕ್ಕೂ ಅಂದು ಹುಬ್ಬಳ್ಳಿಯಲ್ಲಿ ಅಂದು ಆಗಿದ್ದಾದರೂ ಏನು ಗೊತ್ತಾ..?
ಹುಬ್ಬಳ್ಳಿಯಲ್ಲಿ ಅಂದು 1992 ಡಿಸೆಂಬರ್ 5 ರಂದು ನಗರದಲ್ಲಿ ವಾತಾವರಣ ಭುಗಿಲೆದ್ದಿತ್ತು. ಡಿಸೆಂಬರ್ 6 ರಂದು ಕರಸೇವೆಗೂ ಮುನ್ನ ನಗರದಲ್ಲಿ ಗಲಭೆ ಎದ್ದಿತ್ತು. ಇಡೀ ದೇಶದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಹೋರಾಟ ನಡೆಯುತ್ತಿತ್ತು. ವಿಐಪಿ, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಈ ಹೋರಾಟವನ್ನು ಕೈಗೆತ್ತಿಕೊಂಡಿತ್ತು. ಸಾರ್ವಜನಿಕರ ಆಸ್ತಿ – ಪಾಸ್ತಿಗೆ ನಷ್ಟ ಮಾಡುವಂತ ಘಟನೆಗಳು ನಡೆದಿವೆ. ಘಟನೆ ಸಂಬಂಧ ಅಂದು 9 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು. ಹುಬ್ಬಳ್ಳಿಯ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಪ್ರಕರಣ ಇಲ್ಲಿಯವರೆಗೂ ಪೆಂಡಿಂಗ್ ಉಳಿದಿತ್ತು.
ಆರೋಪಿಗಳಾದ ರಾಜು, ಅಶೋಕ್ ಕಲಬುರಗಿ, ಗುರುನಾಥ ಕಾಟಗಾರ್, ರಾಮಚಂದ್ರ ಕಲಬುರಗಿ, ಮೃತ ಕಲಬುರಗಿ ಸೇರಿದಂತೆ ಹಲವರ ಹುಡುಕಾಟಕ್ಕೆ ಪೊಲೀಸರು ಶುರು ಮಾಡುತ್ತಾರೆ. ಇದೀಗ ಆ ಕೇಸಿಗೆ ಸಂಬಂಧಪಟ್ಟಂತೆ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ರಾಮ ಮಂದಿರ ಉದ್ಘಾಟನೆಯ ಹೊತ್ತಲ್ಲಿಯೇ ಈ ರೀತಿ ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸುತ್ತಿದ್ದಾರೆ. ಹೋರಾಟದ ಎಚ್ಚರಿಕೆನ್ನು ನೀಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











