ಜೈಲಿನಿಂದ ಬಿಡುಗಡೆಯಾದ ನಂತರ ಮುರುಘಾಶರಣರು ಹೇಳಿದ್ದೇನು ?

suddionenews
1 Min Read

ಸುದ್ದಿಒನ್, ಚಿತ್ರದುರ್ಗ, ನವೆಂಬರ್.16 : ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀಗಳು ಇಂದು ಬಿಡುಗಡೆಯಾಗಿದ್ದಾರೆ. ಸುಮಾರು 14 ತಿಂಗಳ ಬಳಿಕ ರಿಲೀಸ್ ಆಗಿದ್ದಾರೆ.

ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡದ ಶರಣರು ಕಾರಾಗೃಹದಿಂದ ನೇರವಾಗಿ ದಾವಣಗೆರೆಗೆ ಪ್ರಯಾಣ ಬೆಳೆಸಿದರು. ಅಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾತನಾಡಿರುವ ಮುರುಘಾಶ್ರೀಗಳು, ನಾನು ಈಗ ಏನು ಮಾತನಾಡುವುದಿಲ್ಲ. ಮೌನವಾಗಿರುತ್ತೇನೆ ಎಂದಿದ್ದಾರೆ.

ಮಾಧ್ಯಮದವರು ನನಗೆ ಒಳ್ಳೆಯ ಸಹಕಾರ ನೀಡಿದ್ದೀರಿ. ನಮ್ಮ ವಕೀಲರು ಹೇಳಿದ್ದನ್ನು ಪ್ರಚಾರ ಮಾಡಿದ್ದೀರಿ. ಮುಂದೆಯೂ ಒಳ್ಳೆಯ ಸಹಕಾರ ನೀಡುತ್ತೀರಿ ಎಂಬ ವಿಶ್ವಾಸವಿದೆ. ಮುಂದೆ ಒಳ್ಳೆಯ ಕೆಲಸವನ್ನೇ ಮಾಡೋಣಾ. ಸದ್ಯಕ್ಕೆ ಏನು ಮಾತಮಾಡುವುದಿಲ್ಲ. ಮೌನವಾಗಿರುತ್ತೇನೆ ಎಂದು ಹೇಳಿದರು.

ನಂತರ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ. ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನು ಭೇಟಿ ಮಾಡಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆದಿದ್ದಾರೆ. ಶ್ರೀಗಳು ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *