ಸುದ್ದಿಒನ್, ಚಿತ್ರದುರ್ಗ, ನವೆಂಬರ್.16 : ಫೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಮುರುಘಾಶ್ರೀಗಳು ಇಂದು ಬಿಡುಗಡೆಯಾಗಿದ್ದಾರೆ. ಸುಮಾರು 14 ತಿಂಗಳ ಬಳಿಕ ರಿಲೀಸ್ ಆಗಿದ್ದಾರೆ.
ಚಿತ್ರದುರ್ಗದಲ್ಲಿ ಪ್ರತಿಕ್ರಿಯೆ ನೀಡದ ಶರಣರು ಕಾರಾಗೃಹದಿಂದ ನೇರವಾಗಿ ದಾವಣಗೆರೆಗೆ ಪ್ರಯಾಣ ಬೆಳೆಸಿದರು. ಅಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದಾರೆ.
ಈ ವೇಳೆ ಮಾತನಾಡಿರುವ ಮುರುಘಾಶ್ರೀಗಳು, ನಾನು ಈಗ ಏನು ಮಾತನಾಡುವುದಿಲ್ಲ. ಮೌನವಾಗಿರುತ್ತೇನೆ ಎಂದಿದ್ದಾರೆ.
ಮಾಧ್ಯಮದವರು ನನಗೆ ಒಳ್ಳೆಯ ಸಹಕಾರ ನೀಡಿದ್ದೀರಿ. ನಮ್ಮ ವಕೀಲರು ಹೇಳಿದ್ದನ್ನು ಪ್ರಚಾರ ಮಾಡಿದ್ದೀರಿ. ಮುಂದೆಯೂ ಒಳ್ಳೆಯ ಸಹಕಾರ ನೀಡುತ್ತೀರಿ ಎಂಬ ವಿಶ್ವಾಸವಿದೆ. ಮುಂದೆ ಒಳ್ಳೆಯ ಕೆಲಸವನ್ನೇ ಮಾಡೋಣಾ. ಸದ್ಯಕ್ಕೆ ಏನು ಮಾತಮಾಡುವುದಿಲ್ಲ. ಮೌನವಾಗಿರುತ್ತೇನೆ ಎಂದು ಹೇಳಿದರು.
ನಂತರ ಜಯದೇವ ಗದ್ದುಗೆ ದರ್ಶನ ಪಡೆದುಕೊಂಡಿದ್ದಾರೆ. ಒಂದು ವರ್ಷದ ಬಳಿಕ ಮಠದಲ್ಲಿ ಊಟ ಮಾಡಿದ್ದಾರೆ. ಈ ವೇಳೆ ಸ್ವಾಮೀಜಿಗಳನ್ನು ಭೇಟಿ ಮಾಡಲು ವೈದ್ಯರು, ವ್ಯಾಪಾರಿಗಳು ಸೇರಿದಂತೆ ನೂರಾರು ಭಕ್ತರು ಆಗಮಿಸಿ ಶ್ರೀಗಳ ದರ್ಶನ ಪಡೆದಿದ್ದಾರೆ. ಶ್ರೀಗಳು ದಾವಣಗೆರೆಯ ವಿರಕ್ತ ಮಠದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















