Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

Facebook
Twitter
Telegram
WhatsApp

ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ. ಹೀಗಾಗಿ ಹಲವರು ಮೈತ್ರಿಗೆ ವಿರೋಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವೈರಲ್ ಆಗುತ್ತಾ ಇದೆ. ದತ್ತ ಮಾಲೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಾ ಇದೆ.

 

ಸಮಯ ಬಂದರೆ ದತ್ತ ಮಾಲೆ ಹಾಕುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಆದರೆ 2018ರಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯ ಅಡಂತ್ಯಾಯ ರಂಗಮಂದಿರದಲ್ಲಿ ಜೆಡಿಎಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ ದತ್ತಮಾಲೆಯನ್ನು ವಿರೋಧಿಸುವ ಮಾತನ್ನು ಆಡಿದ್ದರು.

 

‘ಶ್ರೀರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡಿ, ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದ ಬೀದಿಯಲ್ಲಿ ಹೋಗುತ್ತಾರೆ. ಅದನ್ನು ನೀವೂ ಮೆಚ್ಚಿಕೊಳ್ಳುತ್ತೀರಾ..? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂಥದ್ದೋ ದತ್ತಮಾಲೆ ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆ ಬೇಡುತ್ತಾರೆ. ದೇವರೇ ಕಾಪಾಡಬೇಕು. ಇದೆಲ್ಲ ಬೇಡ ನಮಗೆ. ಮೊದಲು ನೀವೂ ಉಳಿದರೆ ತಾನೇ ದೇವರನ್ನು ಉಳಿಸಲು ಸಾಧ್ಯ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ನಿಲುವನ್ನೇ ಬದಲಾತಿಸುವಂತ ಹೇಳಿಕೆ ನೀಡಿದ್ದಾರೆ. ದತ್ತಮಾಲೆ ಯಾಕೆ ಹಾಕಬಾರದು..? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ಭಯ ಪಡುತ್ತೀನಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!