Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

Facebook
Twitter
Telegram
WhatsApp

ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ. ಹೀಗಾಗಿ ಹಲವರು ಮೈತ್ರಿಗೆ ವಿರೋಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವೈರಲ್ ಆಗುತ್ತಾ ಇದೆ. ದತ್ತ ಮಾಲೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಾ ಇದೆ.

 

ಸಮಯ ಬಂದರೆ ದತ್ತ ಮಾಲೆ ಹಾಕುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಆದರೆ 2018ರಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯ ಅಡಂತ್ಯಾಯ ರಂಗಮಂದಿರದಲ್ಲಿ ಜೆಡಿಎಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ ದತ್ತಮಾಲೆಯನ್ನು ವಿರೋಧಿಸುವ ಮಾತನ್ನು ಆಡಿದ್ದರು.

 

‘ಶ್ರೀರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡಿ, ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದ ಬೀದಿಯಲ್ಲಿ ಹೋಗುತ್ತಾರೆ. ಅದನ್ನು ನೀವೂ ಮೆಚ್ಚಿಕೊಳ್ಳುತ್ತೀರಾ..? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂಥದ್ದೋ ದತ್ತಮಾಲೆ ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆ ಬೇಡುತ್ತಾರೆ. ದೇವರೇ ಕಾಪಾಡಬೇಕು. ಇದೆಲ್ಲ ಬೇಡ ನಮಗೆ. ಮೊದಲು ನೀವೂ ಉಳಿದರೆ ತಾನೇ ದೇವರನ್ನು ಉಳಿಸಲು ಸಾಧ್ಯ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ನಿಲುವನ್ನೇ ಬದಲಾತಿಸುವಂತ ಹೇಳಿಕೆ ನೀಡಿದ್ದಾರೆ. ದತ್ತಮಾಲೆ ಯಾಕೆ ಹಾಕಬಾರದು..? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ಭಯ ಪಡುತ್ತೀನಾ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!