Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿಜೆಪಿ ಮೈತ್ರಿ ಬೆನ್ನಲ್ಲೇ ಕುಮಾರಸ್ವಾಮಿ ಹಳೇ ವಿಡಿಯೋ ವೈರಲ್..!

---Advertisement---

ಲೋಕಸಭಾ ಚುನಾವಣೆಗಾಗಿ ಜೆಡಿಎಸ್, ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಿದೆ. ಇದಕ್ಕೆ ಎರಡು ಪಕ್ಷದಲ್ಲೂ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದೆ. ಜೆಡಿಎಸ್ ಸಿದ್ಧಾಂತವೇ ಬೇರೆ, ಬಿಜೆಪಿ ಸಿದ್ಧಾಂತವೇ ಬೇರೆ ಆಗಿದೆ. ಹೀಗಾಗಿ ಹಲವರು ಮೈತ್ರಿಗೆ ವಿರೋಧಿಸುತ್ತಿದ್ದಾರೆ. ಈ ಬೆನ್ನಲ್ಲೇ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ವೈರಲ್ ಆಗುತ್ತಾ ಇದೆ. ದತ್ತ ಮಾಲೆ ಬಗ್ಗೆ ಕುಮಾರಸ್ವಾಮಿ ಅವರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಾ ಇದೆ.

 

ಸಮಯ ಬಂದರೆ ದತ್ತ ಮಾಲೆ ಹಾಕುತ್ತೇನೆ ಎಂದು ಕುಮಾರಸ್ವಾಮಿ ಅವರು ಹೇಳಿಕೆ ನೀಡಿದ್ದರು. ಆದರೆ 2018ರಲ್ಲಿ ದತ್ತಮಾಲೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದರು. 2018ರಲ್ಲಿ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಮೂಡಿಗೆರೆಯ ಅಡಂತ್ಯಾಯ ರಂಗಮಂದಿರದಲ್ಲಿ ಜೆಡಿಎಸ್ ಸಭೆ ನಡೆದಿತ್ತು. ಈ ಸಭೆಯಲ್ಲಿ ದತ್ತಮಾಲೆಯನ್ನು ವಿರೋಧಿಸುವ ಮಾತನ್ನು ಆಡಿದ್ದರು.

 

‘ಶ್ರೀರಾಮನ ಹೆಸರಿನಲ್ಲಿ ಪ್ರತಿ ವರ್ಷ ಮಾಲೆ ಬೇರೆ ಹಾಕುತ್ತಾರೆ. ಮಾಲೆ ಹಾಕಿಕೊಂಡಿ, ತಾಳ ಬಡಿದುಕೊಂಡು ಚಿಕ್ಕಮಗಳೂರಿನ ಬೀದ ಬೀದಿಯಲ್ಲಿ ಹೋಗುತ್ತಾರೆ. ಅದನ್ನು ನೀವೂ ಮೆಚ್ಚಿಕೊಳ್ಳುತ್ತೀರಾ..? ಭಿಕ್ಷೆ ಬೇರೆ ಬೇಡುತ್ತಾರೆ. ಅದೆಂಥದ್ದೋ ದತ್ತಮಾಲೆ ಹಾಕಿಕೊಂಡು ಮನೆ ಮನೆಗೆ ಹೋಗಿ ಭಿಕ್ಷೆ ಬೇಡುತ್ತಾರೆ. ದೇವರೇ ಕಾಪಾಡಬೇಕು. ಇದೆಲ್ಲ ಬೇಡ ನಮಗೆ. ಮೊದಲು ನೀವೂ ಉಳಿದರೆ ತಾನೇ ದೇವರನ್ನು ಉಳಿಸಲು ಸಾಧ್ಯ’ ಎಂಬ ಹೇಳಿಕೆಯನ್ನು ನೀಡಿದ್ದರು. ಈ ಹೇಳಿಕೆ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು.

ಇದೀಗ ಕುಮಾರಸ್ವಾಮಿ ಅವರು ತಮ್ಮ ನಿಲುವನ್ನೇ ಬದಲಾತಿಸುವಂತ ಹೇಳಿಕೆ ನೀಡಿದ್ದಾರೆ. ದತ್ತಮಾಲೆ ಯಾಕೆ ಹಾಕಬಾರದು..? ದೇವರ ಕಾರ್ಯಕ್ರಮ ಹಾಕುವ ಸಮಯ ಬಂದರೆ ದತ್ತಮಾಲೆ ಹಾಕುತ್ತೇನೆ. ನಮ್ಮ ಧರ್ಮದ ಧರ್ಮಾಭಿಮಾನಕ್ಕೆ ಭಯ ಪಡುತ್ತೀನಾ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...