Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಸಿಎಂ, ಡಿಸಿಎಂ ಆದ್ಮೇಲೆ ಈಗ ಸಚಿವರ ಆಯ್ಕೆ.. ಫಾರ್ಮುಲಾ ಚೆಂಜ್ ಮಾಡಲು ದೆಹಲಿಗೆ ಹೊರಟ ನಾಯಕರು..!

---Advertisement---

 

ಬೆಂಗಳೂರು: ಚುನಾವಣಾ ಫಲಿತಾಂಶ ಬಂದ ದಿನದಿಂದ ಸಿಎಂ ಹುದ್ದೆಗೆ ಆಯ್ಕೆ ಮಾಡುವುದೇ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಿನ ಕೆಲಸವಾಗಿತ್ತು. ಅಂತು ಫೈನಲಿ ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಫೈನಲ್ ಆಗಿದೆ. ಈಗ ಸಂಪುಟದಲ್ಲಿ ಯಾರೆಲ್ಲಾ ಇರ್ತಾರೆ..? ಎಂಬುದೇ ಎಲ್ಲರ ಕುತೂಹಲದ ಪ್ರಶ್ನೆಯಾಗಿದೆ.

ಹೊಸ ಸರ್ಕಾರದಲ್ಲಿ 28 ಹೊಸ ಸಚಿವರ ಆಯ್ಕೆಗಾಗಿ ನೂತನ ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ. ಸಿದ್ದರಾಮಯ್ಯ ಆಪ್ತರಲ್ಲಿ ಹತ್ತು ಮತ್ತು ಡಿಕೆಶಿ ಆಪ್ತರಲ್ಲಿ ಹತ್ತು ಜನ ಸಚಿವರಾಗುತ್ತಾರೆ ಎನ್ನಲಾಗಿತ್ತು. ಇದೀಗ ದೆಹಲಿಯಲ್ಲಿ ತೀರ್ಮಾನವಾಗಲಿದೆ.

ಅದರ ಜೊತೆಗೆ ಒಂದಷ್ಟು ಹೊಸ ಐಡಿಯಾಗಳನ್ನು ಬಳಕೆ ಮಾಡಲಾಗುತ್ತಿದೆ. ಜಿಲ್ಲಾವಾರು ಸಚಿವರ ಆಯ್ಕೆ ಮಾಡಲು ತೀರ್ಮಾನ ಮಾಡಿಕೊಳ್ಳಲಾಗಿದೆ. ಇನ್ನು ಹೊಸ ಮುಖಗಳಿಗೂ ಮಣೆ ಹಾಕುತ್ತಾರೆ ಎನ್ನಲಾಗಿದೆ. ದೆಹಲಿಯಿಂದ ಬಂದ ಬಳಿಕ ಸಂಪುಟದಲ್ಲಿ ಯಾರೆಲ್ಲಾ ಇರ್ತಾರೆ ಎಂಬುದನ್ನು ನಿಯೋಜಿತ ಸಿಎಂ ಅನೌನ್ಸ್ ಮಾಡಲಿದ್ದಾರೆ. ನಾಳೆ ಅಂದ್ರೆ ಮೇ 20ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...