Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಸ್ತ್ರವೆಲ್ಲಾ ಮುಗಿಸಿ, ತಾಳಿ ಕಟ್ಟುವಾಗ ಬೇಡವೆಂದ ವಧು : ಹೊಸದುರ್ಗದಲ್ಲಿ ಇದೆಂಥಾ ಕೇಸ್..?

Facebook
Twitter
Telegram
WhatsApp

ಹೊಸದುರ್ಗ: ಎಲ್ಲಾ ಶಾಸ್ತ್ರಗಳು ಮುಗಿದು, ಮದುವೆಯ ದಿನ ವಧು ಅಥವಾ ವರ ಎಸ್ಕೇಪ್ ಆಗಿರುವಂತ ಅದೆಷ್ಟೋ ಪ್ರಕರಣಗಳನ್ನು ನೋಡಿದ್ದೇವೆ. ಇದೀಗ ಅಂಥದ್ದೇ ಪ್ರಕರಣವೊಂದು ಹೊಸದುರ್ಗದಲ್ಲಿ ನಡೆದಿದೆ. ಹೊಸದುರ್ಗ ತಾಲೂಕಿನ ಚಿಕ್ಕ ಬ್ಯಾಲದಿ ಕೆರೆಯ ಭೈರವೇಶ್ವರ ಕಲ್ಯಾಣ ಮಂಟಪದಲ್ಲಿ ಈ ಘಟನೆ ನಡೆದಿದ್ದು, ವಧು ಯಮುನಾ ಎಂಬಾಕೆ ನನಗೆ ಮದುವೆ ಬೇಡ ಎಂದು ಹಠ ಹಿಡಿದಿದ್ದಾರೆ.

ಚಿಕ್ಕಬ್ಯಾಲದಕೆರೆ ಗ್ರಾಮದ ಸಂತೋಷ್ ಹಾಗೂ ತಿಪರಡ್ಡಿಹಳ್ಳಿಯ ಯಮುನಾ ಎಂಬುವವರಿಗೆ ಮದುವೆ ನಿಶ್ಚಯವಾಗಿತ್ತು. ಹಿರಿಯರು ಒಪ್ಪಿ, ಎಲ್ಲಾ ಶಾಸ್ತ್ರಗಳು ನಡೆದಿದ್ದವು. ಗುರುವಾರಕ್ಕೆ ಮುಹೂರ್ತ ನಿಗಧಿಯಾಗಿತ್ತು. ಹಿಂದಿನ ದಿನವೂ ವಧು – ವರರಿಬ್ಬರು ಶಾಸ್ತ್ರದಲ್ಲಿ ಭಾಗಿಯಾಗಿದ್ದರು. ಆದರೆ ಬೆಳಗ್ಗೆ ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವಧು, ಸಿನಿಮಾ ಸ್ಟೈಲ್ ನಲ್ಲಿ, ನನಗೆ ಮದುವೆ ಬೇಡ ಎಂದು ರಿಜೆಕ್ಟ್ ಮಾಡಿದ್ದಾರೆ.

ಈ ಘಟ‌ನೆಯ ಬಳಿಕ ಮದುವೆಯ ಮನೆಯಲ್ಲೇ ಇದ್ದ ಸಂಬಂಧಿಕರೆಲ್ಲ ವಧುವಿನ ಮನಸ್ಸು ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಇಂಥ ನಿರ್ಧಾರಕ್ಕೆ ಕಾರಣ ತಿಳಿಯುವುದಕ್ಕೆ ಯತ್ನಿಸಿದ್ದಾರೆ. ಯಾರ ಮಾತಿಗೂ ಕಿವಿಗೊಡದೆ, ಯಾರ ಮನವಿಗೂ ಸ್ಪಂದಿಸದೆ ಮದುವೆ ನನಗೆ ಇಷ್ಟವಿಲ್ಲ. ನಾನು ಮದುವೆ ಆಗಲ್ಲ ಎಂದೇ ವಧು ಹಠ‌ಮಾಡಿದ್ದಾರೆ. ಕೊನೆಗೂ ಮದುವೆ ರದ್ದಾಗಿದ್ದು, ಸಂಬಂಧಿಕರೆಲ್ಲಾ ವಾಪಾಸ್ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

ಹೆಚ್ಚಾದ ಬಿಸಿಲು ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಿ : ವಿ.ಎ.ಪ್ರಕಾಶ್‍ರೆಡ್ಡಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 01 : ಈ ವರ್ಷದ ಬೇಸಿಗೆ ಬಿಸಿಲು ಅತಿಯಾಗಿರುವುದರಿಂದ ಕುರಿ-ಮೇಕೆ ಇನ್ನಿತರೆ ಜಾನುವಾರುಗಳನ್ನು ಬೆಳಿಗ್ಗೆ ಆರು

error: Content is protected !!