Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ರಶ್ಮಿಕಾ ಬಿಟ್ಟು ಶ್ರೀಲೀಲಾಗೆ ಡಿಮ್ಯಾಂಡ್ ಹೆಚ್ಚಾಗುತ್ತಿದೆಯಂತೆ ತೆಲುಗು ಅಂಗಳದಲ್ಲಿ..!

---Advertisement---

ರಶ್ಮಿಕಾ ಮಂದಣ್ಣ ಹಾಗೂ ಶ್ರೀಲೀಲಾ ಇಬ್ಬರು ಕನ್ನಡದ ನಟಿಯರೇ. ಸದ್ಯ ಬೇರೆ ಭಾಷೆಯಲ್ಲಿ ಮಿಂಚುತ್ತಿದ್ದಾರೆ. ಅದರಲ್ಲೂ ರಶ್ಮಿಕಾ ಮಂದಣ್ಣ ಹಿಂದಿಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರೆ, ಶ್ರೀಲೀಲಾ ತೆಲುಗು ಸಿನಿಮಾದಲ್ಲಿ ಸಿಕ್ಕಾಪಟ್ಟೆ ಬೇಡಿಕೆಯ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಶ್ರೀಲೀಲಾ ತೆಲುಗು ಇಂಡಸ್ಟ್ರಿಗೆ ಎಂಟ್ರಿಯಾಗಿದ್ದೆ ತಡ, ಬ್ಯಾಕ್ ಟು ಬ್ಯಾಕ್ ಬಿಗ್ ಸ್ಟಾರ್ ಗಳ ಜೊತೆಗೆ ಸಿನಿಮಾ ಮಾಡುತ್ತಿದ್ದಾರೆ. ಮಹೇಶ್ ಬಾಬು, ಪವನ್ ಕಲ್ಯಾಣ್ ಸೇರಿದಂತೆ ಹಲವು ನಟರ ಜೊತೆಗೆ ಸ್ಕ್ರೀನ್ ಶೇರ್ ಮಾಡಿಕೊಂಡಿದ್ದಾರೆ. ಈಗಾಗಲೇ ರವಿತೇಜ ಜೊತೆಗೆ ಒಂದು ಹಿಟ್ ನೀಡಿದ್ದು, ಈಗ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ. ಇತ್ತಿಚೆಗಷ್ಟೇ ಶ್ರೀಲೀಲಾಗೆ ಸಂಬಂಧಿಸಿದಂತ ಸುದ್ದಿಯೊಂದು ವೈರಲ್ ಆಗಿತ್ತು. ಶ್ರೀಲೀಲಾ ಬೋಲ್ಡ್ ಪಾತ್ರ ಮಾಡು ಎಂದಿದ್ದಕ್ಕೆ, ಆ ಡೈರೆಕ್ಟರ್ ಜೊತೆಗಿನ ಸಿನಿಮಾವನ್ನೇ ಕೈಬಿಟ್ಟಿದ್ದರು ಎಂಬುದು. ಇದೀಗ ಮತ್ತೊಂದು ಸುದ್ದಿ ವೈರಲ್ ಆಗುತ್ತಿದೆ.

 

ರಶ್ಮಿಕಾ ಅವಕಾಶಗಳೆಲ್ಲಾ ಶ್ರೀಲೀಲಾ ಪಾಲಿಗೆ ಧಕ್ಕುತ್ತಿವೆ ಎನ್ನಲಾಗುತ್ತಿದೆ. ವೆಂಕಿ ಕುಮುಡುಲು ನಿರ್ದೇಶನದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ಸಿನಿಮಾ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಇದೀಗ ಆ ಸಿನಿಮಾಗೆ ನಿರ್ಮಾಪಕರೇ ನಟಿಯನ್ನು ಬದಲಾಯಿಸಿದ್ದಾರೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಹಿಂದಿಯಲ್ಲಿ ಬ್ಯುಸಿ ಇರುವ ರಶ್ಮಿಕಾ ಬದಲಿಗೆ ತೆಲುಗು ಮಂದಿಯಲ್ಲಿ ಕ್ರೇಜ್ ಕ್ರಿಯೇಟ್ ಮಾಡಿರುವ ಶ್ರೀಲೀಲಾರನ್ನು ಆಯ್ಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment