Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಬಳಿಕ ಸೂರಜ್ ಕೇಸ್ : ಕೇಂದ್ರ ಸಚಿವ ಕುಮಾರಸ್ವಾಮಿ ಏನಂದ್ರು..?

Facebook
Twitter
Telegram
WhatsApp

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಸಾವಿರಾರು ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಪ್ರಕರಣ ಬೆಳಕಿಗೆ ಬಂದು ದೇವೇಗೌಡ್ರ ಕುಟುಂಬಕ್ಕೆ ಮುಜುಗರ ಉಂಟು ಮಾಡಿದೆ. ಪ್ರಕತಣ ಬೆಳಕಿಗೆ ಬಂದ ಬಳಿಕ ತಲೆ‌ಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳಿಗೆ ಸರಂಡರ್ ಆಗಿದ್ದೆ ಒಂದು ತಿಂಗಳ ಬಳಿಕ. ಸದ್ಯ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ. ಇದರ ಬೆನ್ನಲ್ಲೇ ರೇವಣ್ಣ ಅವರ ಮತ್ತೊಬ್ಬ ಮಗ ಸೂರಜ್ ರೇವಣ್ಣನದ್ದು ಕೇಸ್ ಒಂದು ಬೆಳಕಿಗೆ ಬಂದಿದೆ. ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಾರೆಂದು ಪ್ರಕರಣ ದಾಖಲಾಗಿದೆ.

ಈ ಸಂಬಂಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿ‌ನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ದಯವಿಟ್ಟು ಇಂತಹ ವಿಷಯಗಳನ್ನು ನನ್ನ ಬಳಿ ಕೇಳಬೇಡಿ. ರಾಜ್ಯಕ್ಕೆ ಸಂಬಂಧ ಪಟ್ಟಂತ ವಿಚಾರಗಳು ಏನಾದರೂ ಇದ್ದರೆ ಹೇಳಿ. ಈ ರೀತಿಯ ವಿಚಾರಗಳನ್ನು ನನ್ನ ಹತ್ತಿರ ಯಾಕೆ ಚರ್ಚೆ ಮಾಡುತ್ತೀರ. ಅದರ ಅವಶ್ಯಕತೆ ಏನಿದೆ..? ಅದಕ್ಕೆ ಅಂತ ಕಾನೂನು ಇದೆ. ಅದನ್ನು ಕಾನೂನು ನೋಡಿಕೊಳ್ಳುತ್ತದೆ ಎಂದು ಗರಂ ಆಗಿದ್ದಾರೆ.

ಸೂರಜ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನಿಂದಾನೇ ದೂರು ದಾಖಲಾಗಿದೆ. ಒಂದಿನ ತೋಟದ ಮನೆಗೆ ಒಬ್ಬನನ್ನೇ ಕರೆದು ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿರುವುದಾಗಿ ಜೆಡಿಎಸ್ ಕಾರ್ಯಕರ್ತ ದೂರು ನೀಡಿದ್ದಾರೆ. ಜೊತೆಗೆ ಎರಡು ಕೋಟಿ ಹಣದ ಆಮಿಷ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ‌. ಇದರ ಬೆನ್ನಲ್ಲೇ ಸೂರಜ್ ರೇವಣ್ಣ ಕಡೆಯಿಂದ ದೂರು ದಾಖಲಾಗಿದ್ದು, ಐದು ಕೋಟಿಗೆ ಡಿಮ್ಯಾಂಡ್ ಇಟ್ಟು, ಈ ರೀತಿ ಕೇಸು ದಾಖಲಿಸಿದ್ದಾರೆ ಎಂದು ಪ್ರತಿದೂರು ದಾಖಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ನಗರದ ಪಾಂಡುರಂಗ ಸ್ವಾಮಿ ದೇವಸ್ಥಾನದಲ್ಲಿ ಭಾನುವಾರ ಶ್ರೀ ಹರಿವಾಯುಗುರು ಸೇವಾ ಟ್ರಸ್ಟ್ ವತಿಯಿಂದ ಆಚರಿಸುವ ಹರಿದಾಸ ಹಬ್ಬ ಸಪ್ತಾಹದ ಆಹ್ವಾನ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಟ್ರಸ್ಟ್ ನ ಕಾರ್ಯದರ್ಶಿ

ಚಿತ್ರದುರ್ಗ | ಐಎಂಎ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 27 : ಭಾರತೀಯ ವೈದ್ಯಕೀಯ ಸಂಘ (ಐಎಮ್‌ಎ) ಚಿತ್ರದುರ್ಗ ಶಾಖೆಯ 2024-25 ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಡಾ. ಪಾಲಾಕ್ಷಯ್ಯ ಎಲ್. ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ನಗರದ ಐಎಂಎ

ಕುಮಾರಸ್ವಾಮಿಯವರು ಹಿಂದೆ ಚುನಾವಣೆಯಲ್ಲಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ ? – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಅಕ್ಟೋಬರ್ 27: ಕುಮಾರಸ್ವಾಮಿಯವರು ಹಿಂದೆ ಮುಖ್ಯಮಂತ್ರಿಯಾಗಿದ್ದಾಗ, ಮಂಡ್ಯದಲ್ಲಿ ಹಾಗೂ ನಂತರ ರಾಮನಗರದಲ್ಲಿ ಸೋತಿದ್ದರು. ಆಗ ಅವರು ಅಭಿಮನ್ಯು ಆಗಿರಲಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮರುಪ್ರಶ್ನಿಸಿದರು. ನಿಖಿಲ್ ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಅಭಿಮನ್ಯುವಲ್ಲ, ಅರ್ಜುನನಾಗಿ ಹೊರಹೊಮ್ಮಮಲಿದ್ದಾರೆ

error: Content is protected !!