Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೋಕಸಭೆಯಲ್ಲಿ ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ..!

Facebook
Twitter
Telegram
WhatsApp

ಚಿಕ್ಕಬಳ್ಳಾಪುರ: ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಸೋಲಿಸಿದ್ದರು. ಈ ಬಾರಿಯ ಲೋಕಸಭಾ ಚುನಾವೆಯಲ್ಲೂ ಸುಧಾಕರ್ ಯಾವುದೇ ಕಾರಣಕ್ಕೂ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ ಎಂದೇ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದರು. ಅಷ್ಟೇ ಯಾಕೆ ಒಂದೇ ಒಂದು ಮತ ಜಾಸ್ತಿ ಬಂದರು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಿಒಗ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕೆ.ಸುಧಾಕರ್ ಗೆಲುವು ಕಂಡಿದ್ದಾರೆ. ಈ ಮೂಲಕ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡ್ತಾರಾ ಅಂತ ಸುಧಾಕರ್ ಬೆಂಬಲಿಗರು ಕಾಯುತ್ತಿದ್ದಾರೆ.

ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಮನೆಯ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂದವಾರದಲ್ಲಿರುವ ಮನೆ ಮೇಲೆ ದಾಳಿ ನಡೆದಿದ್ದು, ಪೊಲೀಸರು ಬಂದು ಪರಿಶೀಲನೆ‌ ನಡೆಸಿದ್ದಾರೆ. ಸಿಸಿಟಿವಿ ಚೆಕ್ ಮಾಡಿದ್ದು, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಂದಾನೂ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರದೀಪ್ ಈಶ್ವರ್ ತಮ್ಮ ಚೇತನ್, ಈ ಘಟನೆಯ ಹಿಂದೆ ಸುಧಾಕರ್ ಅವರ‌ ಬೆಂಬಲಿಗರು ಇದ್ದಾರೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಮನೆಯ ಸಿಬ್ಬಂದಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಸುಮಾರು 10.15ರ ಸಮಯ ಅದು. ನಾಲ್ಕೈದು ಹುಡುಗರು ಕಲ್ಲು ಎಸೆದಿದ್ದಾರೆ. ಸಿಸಿಟಿವಿ ಸೆನ್ಸಾರ್ ಆನ್ ಆಗುತ್ತಿದ್ದಂತೆ ಓಡಿ ಹೋಗಿದ್ದಾರೆ. ಕಿಟಕಿ ಗಾಜು ಪುಡಿ ಪುಡಿಯಾಗಿದೆ. ಶಬ್ಧ ಕೇಳಿ ನಾವೂ ಕೂಡ ಹೊರಗೆ ಓಡಿ ಬಂದೆವು. ಅಷ್ಟರಲ್ಲಿ ಆ ಊಡುಗರು ಅಲ್ಲಿಂದ ಓಡಿ ಹೋಗಿದ್ದರು. ಈ ರೀತಿಯ ಘಟನೆ ಯಾವತ್ತು ಆಗಿರಲಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

Kamala Harris: ಅಮೇರಿಕಾ ಅಧ್ಯಕ್ಷ ಸ್ಥಾನದ ಸನಿಹದಲ್ಲಿ ಭಾರತೀಯ ಮೂಲದ ಕಮಲಾ ಹ್ಯಾರಿಸ್..!

ಸುದ್ದಿಒನ್ : ವಿಶ್ವದ ದೊಡ್ಡಣ್ಣ ಅಮೆರಿಕದಲ್ಲಿ ಅಧ್ಯಕ್ಷೀಯ ಚುನಾವಣೆಯ ಕಾವು ಜೋರಾಗಿದೆ. ಅಧ್ಯಕ್ಷೀಯ ರೇಸ್‌ಗೆ ಅಂತಿಮವಾಗಿ ಯಾರು ನಿಲ್ಲುತ್ತಾರೆ ಮತ್ತು ಯಾರು ಯಾರನ್ನು ಎದುರಿಸುತ್ತಾರೆ ಎಂಬ ವಿಷಯ ತೀವ್ರ ಕುತೂಹಲ ಮೂಡಿಸಿದೆ. ಪ್ರಸ್ತುತ ಡೆಮಾಕ್ರಟಿಕ್

error: Content is protected !!