Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭೆಯಲ್ಲಿ ಸುಧಾಕರ್ ಗೆಲುವು ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ..!

---Advertisement---

ಚಿಕ್ಕಬಳ್ಳಾಪುರ: ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಸೋಲಿಸಿದ್ದರು. ಈ ಬಾರಿಯ ಲೋಕಸಭಾ ಚುನಾವೆಯಲ್ಲೂ ಸುಧಾಕರ್ ಯಾವುದೇ ಕಾರಣಕ್ಕೂ ಗೆಲ್ಲುವುದಕ್ಕೆ ಸಾಧ್ಯವೇ ಇಲ್ಲ ಎಂದೇ ಪ್ರದೀಪ್ ಈಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದರು. ಅಷ್ಟೇ ಯಾಕೆ ಒಂದೇ ಒಂದು ಮತ ಜಾಸ್ತಿ ಬಂದರು ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಇದಿಒಗ ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕೆ.ಸುಧಾಕರ್ ಗೆಲುವು ಕಂಡಿದ್ದಾರೆ. ಈ ಮೂಲಕ ಪ್ರದೀಪ್ ಈಶ್ವರ್ ರಾಜೀನಾಮೆ ಕೊಡ್ತಾರಾ ಅಂತ ಸುಧಾಕರ್ ಬೆಂಬಲಿಗರು ಕಾಯುತ್ತಿದ್ದಾರೆ.

ಇದರ ಬೆನ್ನಲ್ಲೇ ಪ್ರದೀಪ್ ಈಶ್ವರ್ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ. ಮನೆಯ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಂದವಾರದಲ್ಲಿರುವ ಮನೆ ಮೇಲೆ ದಾಳಿ ನಡೆದಿದ್ದು, ಪೊಲೀಸರು ಬಂದು ಪರಿಶೀಲನೆ‌ ನಡೆಸಿದ್ದಾರೆ. ಸಿಸಿಟಿವಿ ಚೆಕ್ ಮಾಡಿದ್ದು, ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಂದಾನೂ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರದೀಪ್ ಈಶ್ವರ್ ತಮ್ಮ ಚೇತನ್, ಈ ಘಟನೆಯ ಹಿಂದೆ ಸುಧಾಕರ್ ಅವರ‌ ಬೆಂಬಲಿಗರು ಇದ್ದಾರೆಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಮನೆಯ ಸಿಬ್ಬಂದಿಯೊಬ್ಬರು ಈ ಬಗ್ಗೆ ಮಾಹಿತಿ ನೀಡಿದ್ದು, ಸುಮಾರು 10.15ರ ಸಮಯ ಅದು. ನಾಲ್ಕೈದು ಹುಡುಗರು ಕಲ್ಲು ಎಸೆದಿದ್ದಾರೆ. ಸಿಸಿಟಿವಿ ಸೆನ್ಸಾರ್ ಆನ್ ಆಗುತ್ತಿದ್ದಂತೆ ಓಡಿ ಹೋಗಿದ್ದಾರೆ. ಕಿಟಕಿ ಗಾಜು ಪುಡಿ ಪುಡಿಯಾಗಿದೆ. ಶಬ್ಧ ಕೇಳಿ ನಾವೂ ಕೂಡ ಹೊರಗೆ ಓಡಿ ಬಂದೆವು. ಅಷ್ಟರಲ್ಲಿ ಆ ಊಡುಗರು ಅಲ್ಲಿಂದ ಓಡಿ ಹೋಗಿದ್ದರು. ಈ ರೀತಿಯ ಘಟನೆ ಯಾವತ್ತು ಆಗಿರಲಿಲ್ಲ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment