ಚಿಕ್ಕಬಳ್ಳಾಪುರ: ಕಾಂಗ್ರೆಸ್ ನಲ್ಲಿ ಸಿಎಂ ಹುದ್ದೆಯ ಮನಸ್ತಾಪ ಇದ್ದಿದ್ದೆ. ಯಾವುದೇ ಪಕ್ಷ ಬಂದರೂ ಸಹ ಆ ಪಕ್ಷದಲ್ಲಿ ಸಿಎಂ ಆಕಾಂಕ್ಷಿಗಳು, ಸಚಿವಕಾಂಕ್ಷಿಗಳು ಇದ್ದೆ ಇರುತ್ತಾರೆ. ಕಾಂಗ್ರೆಸ್ ನಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಸಿಎಂ ಹುದ್ದೆಯ ಯುದ್ಧ ನಡೆಯುತ್ತಲೆ ಇರುತ್ತದೆ. ಈ ವಿಚಾರಕ್ಕೆ ಈಗ ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಅವಕಾಶ ನೀಡಿವೆ.
ನಿನ್ನೆಯಷ್ಟೇ ಕುಮಾರಸ್ವಾಮಿ ಅವರು ಡಿಕೆ ಶಿವಕುಮಾರ್ ಜೆಡಿಎಸ್ ಗೆ ಬಂದರೆ ನಮ್ಮ ಎಲ್ಲರ ಬೆಂಬಲ ಇದ್ದೆ ಇರುತ್ತದೆ ಎಂದಿದ್ದರು. ಈಗ ಬಿಜೆಪಿಯಿಂದ ಸಿಟಿ ರವಿ ಅವರು ಆಫರ್ ನೀಡುತ್ತಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಅವರು, ಕಾಂಗ್ರೆಸ್ ಬಿಟ್ಟು ಬಂದರೆ ಬಿಜೆಪಿ ಯೋಚನೆ ಮಾಡುತ್ತದೆ ಎಂದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು, ನಮ್ಮದು ಅಪ್ಪಟ ದೇಶ ಭಕ್ತರ ಪಾರ್ಟಿ. ಅವರು ಹೇಳುವ ಹಾಗಿಲ್ಲ, ನಾವೂ ಕೊಡುವ ಹಾಗಿಲ್ಲ. ಬಿಜೆಪಿ ಕಾಂಗ್ರೆಸ್ ಎಣ್ಣೆ ಸೀಗೆಕಾಯಿ ಇದ್ದಂಗೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ಬಿಟ್ಟು ಬಂದ್ರೆ ಬಿಜೆಪಿ ಯೋಚನೆ ಮಾಡುತ್ತೆ ಎಂದಿದ್ದಾರೆ.

ವಿಧಾನಸಭಾ ಚುನಾವಣಾ ಸಮಯದಲ್ಲಿ ಜೆಡಿಎಸ್ ಪಕ್ಷದಲ್ಲೂ ಈ ರೀತಿಯ ಮನಸ್ತಾಪಗಳು ಮೂಡಿದ್ದವು. ಗೌಡ್ರ ಕುಟುಂಬದಲ್ಲಿಯೇ ಮನಸ್ತಾಪ ಎದ್ದಿತ್ತು. ಭವಾನಿ ರೇವಣ್ಣ ಅವರು ಟಿಕೆಟ್ ಗಾಗಿ ಹಠ ಹಿಡಿದಿದ್ದರು. ಆಗ ಕೂಡ ಸಿಟಿ ರವಿ ಅವರು, ಬಿಜೆಪಿಗೆ ಬರಲಿ ಎಂದೇ ಆಹ್ವಾನ ನೀಡಿದ್ದರು. ಬಿಜೆಪಿಗೆ ಬಂದರೆ ಆ ಕ್ಷೇತ್ರದ ಟಿಕೆಟ್ ನೀಡುವುದಾಗಿಯೂ ಬಿಜೆಪಿ ಹೇಳಿತ್ತು. ಇದೀಗ ಡಿಕೆ ಶಿವಕುಮಾರ್ ಅವರನ್ನು ಕರೆಯುತ್ತಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















