Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೋಕಸಭಾ ಚುನಾವಣೆಯ ಬಳಿಕ ಡಿಕೆಶಿ ಸಿಎಂ : ಯತ್ನಾಳ್ ಈ ಭವಿಷ್ಯ ನುಡಿದಿದ್ದೇಕೆ..?

---Advertisement---

ವಿಜಯಪುರ: ಕಾಂಗ್ರೆಸ್ ನಲ್ಲಿ ಸಿಎಂ ವಿಚಾರವೇ ಸಾಕಷ್ಟು ಸಲ ಚರ್ಚೆಗೆ ಗ್ರಾಸವಾಗಿದೆ. ಆರಂಭದಲ್ಲಿಯೇ ಸಿಎಂ ಸ್ಥಾನದ ಪೈಪೋಟಿ ನಡೆದಿತ್ತು. ಬಳಿಕ ಹೈಕಮಾಂಡ್ ಡಿಕೆಶಿ ಮನವೊಲಿಸಿದೆ. ಲೋಕಸಭೆ ಚುನಾವಣೆಯ ಬಳಿಕ ಸಿಎಂ ಸ್ಥಾನ ಬದಲಾವಣೆಯಾಗುತ್ತದೆ ಎಂದೇ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಅದರಲ್ಲೂ ಲೋಕಸಭಾ ಚುನಾವಣೆಯ ಬಳಿಕ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿಯೇ‌ ಇರಲ್ಲ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದಾರೆ. ಇದರ ನಡುವೆ ಇದೀಗ ಬಸನಗೌಡ ಪಾಟೀಲ್ ಯತ್ನಾಳ್ ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಲೋಕಸಭಾ ಚುನಾವಣೆಯ ಬಳಿಕ ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ತಮ್ಮ ಪರವಾಗಿರುವವರನ್ನು ಆಯ್ಕೆ ಮಾಡಿಕೊಂಡು ಡಿಕೆಶಿ ಸಿಎಂ ಆಗುವುದಕ್ಕೆ ಮುಂದಾಗಿದ್ದಾರೆ. ಅದಕ್ಕೆಂದೆ ಲಿಂಗಾಯತರು, ಒಕ್ಕಲಿಗರು ಒಂದೇ ಎನ್ನುವ ಸಂದೇಶ ಕೊಡುವುದಕ್ಕೆ ವಚಾನನಂದ ಸ್ವಾಮೀಜಿಗಳು ಮುಂದಾಗಿದ್ದಾರೆ. ಅದಕ್ಕಾಗಿಯೇ ಬಾಗಲಕೋಟೆಯಿಂದ ಶಿವಾನಂದ ಪಾಟೀಲ್ ರ ಮಗಳನ‌್ನು ಆರಿಸಿ, ಕಳುಹಿಸಿ, ಶಿವಾನಂದ ಪಾಟೀಲರು ನನ್ನ ಜೊತೆಗೆ ಚೆನ್ನಾಗಿದ್ದಾರೆ. ಡಿಕೆಶಿ ಹಾಗೂ ಪಾಟೀಲ್ ಸೇರಿ ಸಿದ್ದರಾಮಯ್ಯರನ್ನು ಕೆಳಗಿಳಿಸುವ ಕಾರ್ಯತಂತ್ರ ರೂಪಿಸಿದ್ದಾರೆ.

 

ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನ ಮಾಡದಿದ್ದರೆ ಸಿಎಂ ಹುದ್ದೆ ಹೋಗುವುದು ಗ್ಯಾರಂಟಿ ಎಂದು ಭವಿಷ್ಯ ಕೂಡ ನುಡಿದು, ಐದು ಗ್ಯಾರಂಟಿಗಳ ಜೊತೆಯೂ ಇದು ಒಂದು ಗ್ಯಾರಂಟಿ ಎಂದು ಹೇಳಿದರು. ಸಚಿವ ಶಿವಾನಂದ ಪಾಟೀಲ್, ಧಾರವಾಡದ ಕೆಲ ಶಾಸಕರು, ಬೆಳಗಾವಿಯ ಲೋಕಸಭಾ ಅಭ್ಯರ್ಥಿ ಸೇರಿದಂತೆ ಇತರ ಬೆಂಬಲಿಗರನ್ನು ಸೋಲಿಸದಿದ್ದರೆ ಸಿದ್ದರಾಮಯ್ಯ ಖುರ್ಚಿ ಹೋಗೋದು ಗ್ಯಾರಂಟಿ ಎಂದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...