ಎರಡೂವರೆ ವರ್ಷದ ಬಳಿಕ ಡಿಕೆಶಿ ಸಿಎಂ ಆಗ್ತಾರೆ : ರವಿ ಗಾಣಿಗ ಮಾತಿಗೆ ಸಚಿವ ಎಂಬಿ ಪಾಟೀಲ್ ಏನಂದ್ರು..?

suddionenews
1 Min Read

ಬೆಂಗಳೂರು: ಎರಡೂವರೆ ವರ್ಚದ ಬಳಿಕ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಆಗ್ತಾರೆ ಎಂಬ ವಿಚಾರ ನಿನ್ನೆ ಮೊನ್ನೆಯದ್ದಲ್ಲ. ಸರ್ಕಾರ ರಚನೆ ಆದಾಗಿನಿಂದ ಈ ಮಾತು ಕೇಳಿ ಬರ್ತಾನೆ ಇದೆ. ಇದೇ ವಿಚಾರವಾಗಿ ನಿನ್ನೆ ಮಂಡ್ಯ ಶಾಸಕ ರವಿ ಗಾಣಿಗ ಮಾತನಾಡಿದ್ದರು. ಎರಡೂವರೆ ವರ್ಷವಾದ ಬಳಿಕ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಹೇಳಿದ್ದರು.

ಈ ಹೇಳಿಕೆಗೆ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮೇಲಿನ ಅಭಿಮಾನ, ಪ್ರೀತಿಯಿಂದ ಈ ರೀತಿ ಹೇಳಿರಬಹುದು. ರಾಜ್ಯಕ್ಕೆ ಯಾರೂ ಮುಖ್ಯಮಂತ್ರಿಯಾಗಬೇಕು, ಯಾರೂ ಮುಂದುವರೆಯಬೇಕು ಎಂಬುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ ಎಂದು ಕೇಳಿದ್ದಾರೆ.

ಇನ್ನು ಅಸಲಿಗೆ ಬದಲಾವಣೆಯ ಅವಶ್ಯಕತೆ ಇದೆಯಾ, ಇಲ್ಲವಾ, ಸಚಿವ ಸಂಪುಟದಲ್ಲಿ ಯಾರಿರಬೇಕು ಮೊದಲಾದ ಎಲ್ಲ ಸಂಗತಿಗಳನ್ನು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ರಂದೀಪ್ ಸಿಂಗ್ ಸುರ್ಜೆವಾಲಾ ಅವರನ್ನೊಳಗೊಂಡ ಹೈ ಕಮಾಂಡ್ ತೀರ್ಮಾನಿಸುತ್ತದೆ. ಕೆಲ ಶಾಸಕರು ತಮ್ಮ ತಮ್ಮ ನಾಯಕರ ಮೇಲಿನ ಪ್ರೀತಿಯಿಂದ ಅವರು ಸಿಎಂ ಆಗಬೇಕು ಅನ್ನುತ್ತಿರುತ್ತಾರೆ. ಹೈಕಮಾಂಡ್ ಅದೆಲ್ಲವನ್ನು ಗಮನಿಸುತ್ತಿರುತ್ತದೆ. ಯಾವುದೇ ನಾಯಕರು ಮುಖ್ಯಮಂತ್ರಿ ವಿಚಾರವನ್ನು ಬಹಿರಂಗವಾಗಿ ಮಾತನಾಡಬಾರದು ಎಂದು ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ಸ್ವತಃ ಡಿಕೆ ಶಿವಕುಮಾರ್ ಕೂಡ ಹೇಳಿದ್ದಾರೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *