Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುಗಾದಿ ನಂತರ ಒಳ್ಳೆ ಬೆಳೆ-ಮಳೆಯಾಗಲಿದೆ : ಕೋಡಿಶ್ರೀ

Facebook
Twitter
Telegram
WhatsApp

ಕೋಲಾರ: ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ರಾಜ್ಯದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಕಳೆದ ವರ್ಷ ಮಳೆ ಗಗನ ಕಚ್ಚಿದ್ದು, ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ರಾಜ್ಯದೆಲ್ಲೆಡೆ ಬರದ ಪರಿಸ್ಥಿತಿ ತಾಂಡವವಾಡುತ್ತಿದೆ. ಇದೀಗ ರೈತರಿಗೆ ಖುಷಿ ಕೊಡುವಂತ, ಸಂತಸ ಪಡುವಂತ ಭವಿಷ್ಯವನ್ನು ಕೋಡಿಶ್ರೀ ಮಠದ ಶ್ರೀಗಳು ನುಡಿದಿದ್ದಾರೆ.

ಕೋಲಾರ ಜಿಲ್ಲೆ ಮಾಲೂರು ಪಟ್ಟಣದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಕೋಡಿ ಮಠದ ಡಾ.ಶಿವಾನಂದ ಶಿವಯೋಗಿ ಸ್ವಾಮೀಜಿ, ಯುಗಾದಿ ಕಳೆದ ನಂತರ ರಾಜ್ಯದಲ್ಲಿ ಒಳ್ಳೆಯ ಮಳೆ-ಬೆಳೆ ಆಗಲಿದೆ ಎಂಬ ಸಿಹಿ ಸುದ್ದಿ ನೀಡಿದ್ದಾರೆ. ಅವರ ಈ ಭವಿಷ್ಯವಾಣಿಯಿಂದ ರೈತರು ಸಮಾಧಾನಗೊಂಡಿದ್ದಾರೆ. ಬರದಿಂದ ತತ್ತರಿಸಿದ್ದ ರೈತರಿಗೆ ಕೋಡಿಶ್ರೀಗಳ ನುಡಿ ಸಮಾಧಾನ ತಂದಿದೆ.

ಇನ್ನು ಇದೇ ವೇಳೆ ರಾಜಕೀಯದ ಬಗ್ಗೆಯೂ ಮಾತನಾಡಿ, ಗ್ಯಾರಂಟಿಗಳಿಂದ ಸರ್ಕಾರ ನಡೆಯುತ್ತಿದೆಯಾ ಎಂಬ ಪ್ರಶ್ನೆಗೂ ಉತ್ತರಿಸಿ, ನನಗಿಂತ ನಿಮಗೆ ಚೆನ್ನಾಗಿ ಗೊತ್ತಿದೆ. ರಾಷ್ಟ್ರ ರಾಜಕಾರಣ ಕೂಡ ಯುಗಾದಿ ನಂತರವೇ ಗೊತ್ತಾಗಲಿದೆ‌ ಯುಗಾ್ಇ ನಂತರ ಭವಿಷ್ಯ ಬರಲಿದೆ. ಒಂದು ತಿಂಗಳು ಕಳೆದ ಮೇಲೆ ಮಳೆ ಬೆಳೆಯಾಗಲಿದೆ. ಜಾಗತಿಕ ಮಟ್ಟದಲ್ಲಿ ತೊಂದರೆ ಇದೆ. ಬೆಂಕಿ ಹಾವಳಿ, ನೀರಿನ ಹಾವಳಿ, ಯುದ್ಧ ಆಗುತ್ತದೆ. ಅನೇಕ ಸಾವು-ನೋವುಗಳು ಆಗುತ್ತವೆ. ಮತಾಂಧತೆ ಹೆಚ್ಚುತ್ತದೆ. ಬಾಂಬ್ ಸ್ಪೋಟವಾಗುತ್ತದೆ‌ ಭೂಕಂಪ ಆಗುತ್ತದೆ. ಧಾರ್ಮಿಕ ಮುಖಂಡನ ಸಾವು ಸಂಭವಿಸಲಿದೆ ಎಂಬುದಾಗಿ ಭವಿಷ್ಯ ನುಡಿದಿದ್ದಾರೆ. 2024ರ ಹೊಸ ವರ್ಷವೂ ಈ ಬಗ್ಗೆ ಭವಿಷ್ಯ ನುಡಿದಿದ್ದರು. ಅಕಾಲಿಕ ಮಳೆಯಾಗಲಿದೆ, ಜಗತ್ತಿಗೆ ಒಳ್ಳೆಯ ದಿನಗಳಿಲ್ಲ, ಬಾಂಬ್ ಸಿಡಿಯುವ ಸಂಭವವಿದೆ ಎಂದೆಲ್ಲಾ ತಿಳಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಖುಷಿಯಿಂದ ಕ್ಷೇತ್ರದ ಜನರ ಸೇವೆ ಸಲ್ಲಿಸುತ್ತೇನೆ : ಗೋವಿಂದ ಕಾರಜೋಳ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 ; ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ಎಪ್ಪತ್ತು ವರ್ಷಗಳಾಗಿದ್ದರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿರುವ ಇಲ್ಲಿನ ಜನ ಮುಗ್ದರು ಅಮಾಯಕರು, ಕುಡಿಯುವ ನೀರಿಗೂ ಸಮಸ್ಯೆಯಿದೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ.

ಈ ಚುನಾವಣೆಯಲ್ಲಿ ನಾವು ಗೆದ್ದೇ ಗೆಲ್ಲುತ್ತೇವೆ : ಬಿ.ಎನ್. ಚಂದ್ರಪ್ಪ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕ್ಷೇತ್ರದ ಹದಿನೆಂಟುವರೆ ಲಕ್ಷ ಮತದಾರರು ಶುಕ್ರವಾರ ನಡೆದ ಚುನಾವಣೆಯಲ್ಲಿ ನನ್ನ ಭವಿಷ್ಯ ನಿರ್ಣಯಿಸುತ್ತಾರೆ.

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

error: Content is protected !!