Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನಲ್ಲಿ ಅಜ್ಜಯ್ಯನ ದರ್ಶನ ಪಡೆದು.. ಆದಿಚುಂಚನಗಿರಿಯತ್ತ ಹೊರಟ ಉಪ ಮುಖ್ಯಮಂತ್ರಿ ಡಿಕೆಶಿ

---Advertisement---

ತುಮಕೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ತಮ್ಮ ನೆಚ್ಚಿನ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿದ್ದಾರೆ. ಅಜ್ಜಯ್ಯನಿಗೆ ತೀರಾ ಭಕ್ತಿಯಿಂದ ನಡೆದುಕೊಳ್ಳುವುದು ಎಲ್ಲರಿಗೂ ಗೊತ್ತೆ ಇದೆ. ಅದರಲ್ಲೂ ಡಿಕೆ ಶಿವಕುಮಾರ್ ಅವರು ಏ‌ನನ್ನೇ ಕೇಳಿದರೂ ಅಜ್ಜಯ್ಯ ಅದನ್ನು ಈಡೇರಿಸಿದ್ದಾರೆ. ಚುನಾವಣೆಯಲ್ಲೂ ಬಹುಮತ ಬರುವಂತೆ ಮಾಡಪ್ಪ ತಂದೆ ಎಂದೇ ಬೇಡಿಕೊಂಡಿದ್ದರಂತೆ. ಅದರಂತರ ಸರ್ಕಾರ ರಚನೆಯಾಗಿದ್ದು, ನಿನ್ನೆ ಡಿಸಿಎಂ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಇಂದು ಜಿಲ್ಲೆಯ ನೊಣವಿನಕೆರೆಯಲ್ಲಿರುವ ಅಜ್ಜಯ್ಯನ ಮಠಕ್ಕೆ ಭೇಟಿ ನೀಡಿ, ದರ್ಶನ ಪಡೆದಿದ್ದಾರೆ. ಕಾಡಸಿದ್ದೇಶ್ವರ ಮಠದ ಅಜ್ಜಯ್ಯನ ಮೂಲ ಗದ್ದುಗೆಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಠದ ಶ್ರೀ ಕರಿವೃಷಭ ದೇಶಿಕೇಂದ್ರದ ಸ್ವಾಮೀಜಿ ನೇತೃತ್ವದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಮಾಜಿ ಸಚಿವ ಚಲುವರಾಯಸ್ವಾಮಿ, ಶಾಸಕ ಡಾ. ರಂಗನಾಥ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ. ಇನ್ನು ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕೆ ಡಿಕೆಶಿ ಅವರು ನೇರ ಆದಿಚುಂಚನಗಿರಿ ಮಠಕ್ಕೆ ತೆರಳಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...