Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪಕ್ಷ ಗೆದ್ದ ಬಳಿಕ ತುಮಕೂರಿನ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ಕೊಟ್ಟ ಡಿಕೆಶಿ

---Advertisement---

ತುಮಕೂರು: ಕಾಂಗ್ರೆಸ್ ಪಕ್ಷ ಬಹುಮತ ಗಳಿಸಿದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ಇಷ್ಟದ ದೇವರಿಗೆ ಹರಕೆ ತೀರಿಸಿದ್ದಾರೆ. ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆಯ ಕಾಡ ಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ನನಗೆ ಸಹಕಾರ ನೀಡಲಿದ್ದಾರೆ ಎಂದು ಹೇಳುವ ಮೂಲಕ ಮತ್ತೆ ಸಿಎಂ ಆಗುವ ಕನಸು ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ಸದ್ಯ ಸಿಎಂ ಹುದ್ದೆಗೆ ಪೈಪೋಟಿ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಡಿಕೆಶಿ ಮತ್ತು ಸಿದ್ದರಾಮಯ್ಯ ನಡುವೆ ಈ ಪೈಪೋಟಿ ಇದೆ. ಆದ್ರೆ ಪಕ್ಷ ಸಂಘಟನೆಗಾಗಿ ಇಬ್ಬರು ಒಂದಾಗಿದ್ದರು. ಈ ಬಗ್ಗೆ ಮಾತನಾಡಿರುವ ಡಿಕೆಶಿ, ಗುರುಪೀಠ ಸಿಕ್ಕಿದ್ದು ನನ್ನ ಪುಣ್ಯ. ಎಷ್ಟೋ ಸಿಎಂ ಬಂದು ಹೋಗಿದ್ದಾರೆ. ಅಜ್ಜಯ್ಯನ ಆಶೀರ್ವಾದದಿಂದ ಇನ್ನೂ ಎತ್ತರಕ್ಕೆ ಹೋಗುತ್ತೇನೆ ಎಂಬ ನಂಬಿಕೆ ಇದೆ. ಈ ಮಠ ನಂಗೆ ಪುಣ್ಯ ದೈವ ಕ್ಷೇತ್ರ. ನಂಗೆ ಪ್ರತಿಯೊಂದು ಸಂದರ್ಭದಲ್ಲೂ ಅಜ್ಜಯ ಹಾಗೂ ಇಲ್ಲಿನ ಗುರುಗಳು ಮಾರ್ಗದರ್ಶನ ನೀಡಿದ್ದಾರೆ. ಟಿಕೆಟ್ ವಿಚಾರವನ್ನು ಇಲ್ಲಿಯೇ ಚರ್ಚೆ ಮಾಡಿದ್ದು. 134 ಸೀಟು ಕೊಟ್ಟು, ಯಾರ ಹಂಗಿಲ್ಲದೆ ಸರ್ಕಾರ ರಚನೆ ಮಾಡುವಂತೆ ಮಾಡಪ್ಪ ಅಂತ ಬೇಡಿಕೊಂಡಿದ್ದೆ.

2019ರ ಲೋಕಸಭಾ ಚುನಾವಣೆ ಬಳಿಕ ನಾನು ಪಕ್ಷದ ಜವಬ್ದಾರಿ ತೆಗೆದುಕೊಂಡೆ. ಆಗ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ್ದರು. ನನ್ನನ್ನು ಮಂತ್ರಿ ಮಾಡದೆ ಇದ್ದಾಗ ತಾಳ್ಮೆ ಇರಲಿಲ್ಲವಾ..? ಅವರಿಗೆ ನಾನು ಸಹಕಾರ ನೀಡಿದ್ದೇನೆ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...