Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳವಾರವಷ್ಟೇ ಘೋಷಣೆಯಾಗಿದ್ದ ಸೇನೆಯ ಅಗ್ನಿಪಥ್ ಯೋಜನೆಗೆ ವಿರೋಧ : ರೈಲು ತಡೆ, ಬೆಂಕಿ, ಪ್ರತಿಭಟನೆ..!

Facebook
Twitter
Telegram
WhatsApp

ನವದೆಹಲಿ: ಕೆಂದ್ರ ಸರ್ಕಾರದಿಂಸ ಸೇನೆಗೆ ಸೇರುವವರಿಗಾಗಿ ಹೊಸ ಯೋಜನೆಯನ್ನು ಜಾರಿಗೆ ತಂದಿದೆ. ಅಗ್ನಿಪಥ್ ಎಂಬ ಯೋಜನೆಯನ್ನು ಮಂಗಳವಾರವಷ್ಟೇ ಘೋಷಣೆ ಮಾಡಿದೆ. ಆದರೆ ಇದೀಗ ಆ ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಬಿಹಾರದಲ್ಲಿ ಯುವಕರ ಗುಂಪೊಂದು, ದೊಡ್ಡಮಟ್ಟದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

ಈ ಯೋಜನೆಯಿಂದಾಗಿ ಸೇನೆಗೆ ಸೇರಬೇಕೆಂದು ಬಯಸಿ, ಪರೀಕ್ಷೆ ಬರೆದು ನೇಮಕವಾಗಿದ್ದ ಹಾಗೂ ತರಬೇತಿ ಪಡೆದು ಕಾಯುತ್ತಿದ್ದವರಿಗೆ ಇದು ಆತಂಕಕ್ಕೆ ಕಾರಣವಾಗಿದೆ. ಇದರಿಂದ ಸ್ಪರ್ಧಾಳುಗಳು ಪ್ರತಿಭಟಿಸಿದ್ದು, ಈ ಯೋಜನೆ ವಾಪಾಸ್ ತೆಗೆದುಕೊಳ್ಳಿ ಎಂದು ಒತ್ತಾಯ ಹಾಕಿದ್ದಾರೆ.

ಪ್ರತಿಭಟನೆಯಲ್ಲಿದ್ದ ಸ್ಪರ್ಧಾಳುಗಳು ನಮಗೆ ಕೆಲಸ ಕೊಡಿ, ಇಲ್ಲವೆ ನಮ್ಮನ್ನು ಸಾಯಿಸಿಬಿಡಿ ಎಂದು ಭಾರತ್ ಮಾತಾಕಿ ಜೈ ಒಂದೇ ಮಾತರಂ ಎಂದು ಘೋಷಣೆ ಕೂಗಿದ್ದಾರೆ. ಈ ವೇಳೆ ಸೇನೆ ಪರೀಕ್ಷೆ ನಡೆಯುವ ಲಕ್ನೋ ಕೇಂದ್ರ, ಬಿಹಾರದ ಬಿರಾನಜ, ರಾಜಸ್ಥಾನ ಸೇರಿದಂತೆ ಹಲವೆಡೆ ಬೃಹತ್ ರ್ಯಾಲಿ ನಡೆಸಿದ್ದಾರೆ. ಇಜ ರ್ಯಾಲಿಯಲ್ಲಿ ಟೈಯರ್ ಗಳಿಗೆ ಬೆಂಕಿ ಹಚ್ಚಿದ್ದಾರೆ, ರೈಲು ತಡೆದು ರೈಲಿಗೂ ಬೆಂಕಿ ಹಚ್ಚಿದ್ದಾರೆ.

ಕಳೆದ ಎರಡು ವರ್ಷಗಳಿಂದ ತರಬೇತಿ ಪಡೆದು ಸಾಮಾನ್ಯ ನೇಮಕಾತಿಗಾಗಿ ಕಾಯುತ್ತಿದ್ದೆವು. ಕೊರೊನಾದಿಂದ ನೇಮಕಾತಿ ನಿಲ್ಲಿಸಲಾಗಿತ್ತು. ಇದುವರೆಗೂ ನೇಮಕಾತಿ ಪಿನರಾರಂಭ ಮಾಡಿಲ್ಲ. ಎರಡು ವರ್ಷದಿಂದ ಕಾಯುತ್ತಿರುವ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ, ವಯೋಮಿತಿ ಸಡಿಲಿಸಿ ಎಂದು ಪ್ರತಿಭಟಿಸುತ್ತಿರುವ ಅಭ್ಯರ್ಥಿಗಳು ಕೇಳಿಕೊಂಡಿದ್ದಾರೆ. ಅಗ್ನಿಪಥ್ ಯೋಜನೆಯಡಿ 17.5 ವರ್ಷದಿಂದ 21 ವರ್ಷಕ್ಕೆ ವಯೋಮಿತಿ ನಿಗದಿ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!