ಕೃಷಿ ವಿ.ವಿ. ಪ್ರವೇಶಾತಿಯಲ್ಲಿ ಶೇ.50 ರಷ್ಟು ಮೀಸಲಾತಿ ಮತ್ತು ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತ‌ನ : ಸಚಿವ ಬಿ.ಸಿ.ಪಾಟೀಲ್

ಚಿತ್ರದುರ್ಗ, (ಏ.18) : ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಸರ್ಕಾರ ಉತ್ತೇಜನ ನೀಡುತ್ತಿದೆ. ಕೃಷಿ ವಿವಿಗಳಲ್ಲಿ ಬಿ.ಎಸ್ಸಿ. ಪ್ರವೇಶಾತಿಗೆ ಶೇ.50 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ರೈತ ಮಕ್ಕಳಿಗಾಗಿ ವಿಧ್ಯಾನಿಧಿ ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

ಹೊಳಲ್ಕೆರೆ ಪಟ್ಟಣದಲ್ಲಿ ನಿರ್ಮಿಸಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ಬಸ್ ನಿಲ್ದಾಣ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

2 ಸಾವಿರದಿಂದ 11 ಸಾವಿರದ ವರೆಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಪ್ರಸಕ್ತವರ್ಷ 7 ಲಕ್ಷ ಮಕ್ಕಳು ಯೋಜನೆ ಲಾಭ ಪಡೆದಿದ್ದಾರೆ. ರಾಜ್ಯದ ರೈತರಿಗೆ ಪಿ.ಎಂ.ಕಿಸಾನ್ ಸಮ್ಮಾನ್ ಯೋಜಯಡಿ 10 ಸಾವಿರ ಪ್ರೋತ್ಸಾಹ ಧನ ನೀಡಲಾಗುತ್ತಿದೆ.

ಕೃಷಿ ಯಂತ್ರೋಪಕರಣಗಳಿಗೆ‌ ಶೇ.90% ರಷ್ಟು ಸಬ್ಸಿಡಿ ನೀಡಲಾಗಿದೆ. ಸಣ್ಣ ಹಾಗೂ ಅತಿ ಸಣ್ಣ ರೈತರು ಯಂತ್ರೋಪಕರಣಗಳಿಗೆ ಬಳಸುವ ವಾರ್ಷಿಕ ಡೀಸೆಲ್‌ಗೆ 1250 ರೂಪಾಯಿ ಸಹಾಯಧನ ನೀಡಲಾಗುದು. ಈ ಯೋಜನೆಯನ್ನು ಜಾರಿಗೆಗೊಳಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ.

ಹೊಳಲ್ಕೆರೆ ತಾಲೂಕಿಗೆ ಜಲಾಯನ ಅಭಿವೃದ್ಧಿ ಕಾಮಗಾರಿಗಳಿಗಾಗಿ ಪ್ರಸಕ್ತ ವರ್ಷ 14‌ ಕೋಟಿ ಅನುದಾನ ನೀಡಲಾಗಿದೆ. ಕೃಷಿಕರ ಮನಸ್ಸು ನಿಷ್ಕಕಲ್ಮಷವಾದುದು. ದೇಶಕ್ಕೆ ಅನ್ನ ನೀಡುವ ತಾಕತ್ತು ಕೃಷಿಕರಿಗಿದೆ ಎಂದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

54 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago