Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸರ್ಕಾರಿ ಶಾಲೆ ಮುಚ್ಚುವುದಿಲ್ಲವೆಂದು ಸರ್ಕಾರ ಆದೇಶ ಹೊರಡಿಸಲಿ : ಎಐಡಿಎಸ್ಓ ಆಗ್ರಹ

---Advertisement---

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 08 : ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಸರ್ಕಾರ ಲಿಖಿತ ಆದೇಶ ಹೊರಡಿಸಲಿ ಎಂದು AIDSO ಆಗ್ರಹಿಸಿದೆ.

ಈ ವಿಚಾರವಾಗಿ ಪತ್ರಿಕಾ ಪ್ರಕಟಣೆ ನೀಡಿರುವ AIDSO, ಇಂದು ಬೆಳಗಾವಿ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ರವರು, ಸರ್ಕಾರಿ ಶಾಲೆ ಮುಚ್ಚುವುದಿಲ್ಲ ಎಂದು ಹೇಳಿದ್ದಾರೆ. ಜೊತೆಗೆ, ಈ ರೀತಿಯ ಅಪಾದನೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿರುವ ಅಸತ್ಯದಿಂದ ಕೂಡಿದ ವಾದ ಎಂದೂ ಸಹ ಹೇಳಿದ್ದಾರೆ.

ಆದರೆ, ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ದಿನಾಂಕ 15, ಅಕ್ಟೋಬರ್ ಹೊರಡಿಸಿದ ಸುತ್ತೋಲೆಯಲ್ಲಿ KPS Magnet ಶಾಲೆಗಳೊಂದಿಗೆ ಸುತ್ತಲಿನ ಕಡಿಮೆ ದಾಖಲಾತಿಯ ಶಾಲೆಗಳನ್ನು ವಿಲೀನಗೊಳಿಸಬೇಕು ಎಂದು ಆದೇಶಿಸಿದೆ. ಅಂತೆಯೇ, KPS ಶಾಲೆಯನ್ನಾಗಿ ಉನ್ನತೀಕರಿಸುತ್ತಿರುವ ಹಲವು ಶಾಲೆಗಳಿಗೆ ಸುತ್ತಲಿನ ಶಾಲೆಗಳನ್ನು ವಿಲೀನಗೊಳಿಸಿಸಬೇಕು ಎಂಬ ಆದೇಶವನ್ನು ಈಗಾಗಲೇ ಗ್ರಾಮ ಪಂಚಾಯಿತಿ ಮಟ್ಟದ ಹಲವು ಶಾಲೆಗಳಿಗೆ ನೀಡಲಾಗಿದೆ. ಅಧಿವೇಶನದಲ್ಲಿ ಸಚಿವರೇ ಹೇಳಿದಂತೆ, ಗ್ರಾಮ ಪಂಚಾಯಿತಿಗೊಂದರಂತೆ KPS Magnet ಶಾಲೆಗಳನ್ನು ತೆರೆಯಲಾಗುತ್ತದೆ, ಅಂದರೆ ತಮ್ಮದೇ ಇಲಾಖೆಯ ಆದೇಶದಂತೆ ಸರ್ಕಾರ ಮುಂದುವರೆಯುತ್ತಿದೆ.

ಈಗ ಮೂಡುವ ಪ್ರಶ್ನೆಯೆಂದರೆ, ಸರ್ಕಾರದ ಆದೇಶಗಳು ಹೇಳುವುದೇ ಒಂದು, ಮಂತ್ರಿಗಳ ಹೇಳಿಕೆ ಮತ್ತೊಂದು. ಜನ ಯಾವುದನ್ನು ನಂಬಬೇಕು? ಆದ್ದರಿಂದ, ಕನ್ನಡ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ ಎಂಬ ಸಚಿವರ ಒಳ್ಳೆಯ ಆಶಯ ನಿಜವಾದಲ್ಲಿ, ಈ ಕೂಡಲೇ ರಾಜ್ಯ ಸರ್ಕಾರ ತನ್ನ ಅಕ್ಟೋಬರ್ 15ರ ಆದೇಶದಲ್ಲಿ ನಮೂದಿಸಿರುವ ವಿಲೀನದ ಅಂಶವನ್ನು ಹಿಂಪಡೆಯಲಿ ಜೊತೆಗೆ ವಿಲೀನದ ಹೆಸರಿನಲ್ಲಿ ಕಡಿಮೆ ದಾಖಲಾತಿಯ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಲಿಖಿತ ಆದೇಶ ಹೊರಡಿಸಲಿ ಎಂದು AIDSO ಆಗ್ರಹಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now